ಸಂವಿಧಾನ ಜಾಗೃತಿ ರಥಕ್ಕೆ ಅದ್ಧೂರಿ ಸ್ವಾಗತ: ಸಂವಿಧಾನದ ಹಕ್ಕು, ಕರ್ತವ್ಯಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು ಸಂವಿಧಾನ ಜಾಗೃತಿ ಮೂಡಿಸುವಂತಹ ರಥವನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿ, ಕಳಶಗಳನ್ನು ಹೊತ್ತು ಕಾಲ್ನಡಿಗೆಯೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.

ಇದೇ ಸಂದರ್ಭದಲ್ಲಿ ವಿವಿಧ ಕಲಾತಂಡಗಳ ಮೂಲಕ, ವಿದ್ಯಾರ್ಥಿಗಳನ್ನೊಳಗೊಂಡಂತೆ ಫ್ಲಾಶ್ ಕಾರ್ಡನ್ನು ಉಪಯೋಗಿಸುವ ಮೂಲಕ ಅಂಬೇಡ್ಕರ್ ಅವರ ಹಿತ ನುಡಿಗಳು ಅಶೋಕ್ತಿಗಳನ್ನು ತೋರಿಸುವ ಹಾಗೂ ಸಂವಿಧಾನದ ಹಕ್ಕು ಕರ್ತವ್ಯಗಳ ಅರಿವು ಮೂಡಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ನಂತರ ಸಂವಿಧಾನ ಪೀಠಿಕೆಯನ್ನು ಗ್ರಾಮಸ್ಥರಿಗೆ ಬೋಧಿಸಲಾಯಿತು. ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಬಗ್ಗೆ ಭಾಷಣ ಮಾಡಿಸಲಾಯಿತು.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಹಿಳೆಯರಿಗೆ ರಂಗೋಲಿ ಸ್ಪರ್ಧೆಯನ್ನು ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ ಹಾಗೂ ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಿ, ಸಂಪನ್ಮೂಲ ವ್ಯಕ್ತಿಗಳಿಂದ ಸಂವಿಧಾನದ ಬಗ್ಗೆ ಭಾಷಣ ಮಾಡಿಸಲಾಯಿತು.

ಸಂವಿಧಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಮಾತನಾಡಿದ ಹೆಗ್ಗಡಿಹಳ್ಳಿ ಗ್ರಾ.ಪಂ. ಸದಸ್ಯ ಮುನಿಕೃಷ್ಣಪ್ಪ, ಸ್ವಾತಂತ್ರ್ಯ ಬಂದಾಗಿನಿಂದಲೂ ವಿವಿಧ‌ ಸಂಘಟನೆಗಳು ಸಂವಿಧಾನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿವೆ. ಗಣರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಂಡಿದೆ. ಸಂವಿಧಾನದಿಂದಲೇ ನಾವೆಲ್ಲ ಜೀವಿಸುತ್ತಿದ್ದೇವೆ. ಜನಸಾಮಾನ್ಯರಿಗೆ ಎಲ್ಲ ರೀತಿಯ ಸ್ಥಾನ‌ಮಾನ ನೀಡಿರುವ ಸಂವಿಧಾನವನ್ನು ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯ. ಸ್ವಾತಂತ್ರ್ಯ ಬಂದಾಗ ಎಷ್ಟು‌ ಸಂಭ್ರಮ ಪಟ್ಟಿದ್ದೇವೋ ಅದೇ ರೀತಿ ಸಂಭ್ರಮದ ವಾತಾವರಣ ಇಲ್ಲಿ‌ ಮನೆ ಮಾಡಿದೆ ಎಂದು ಹೇಳಿದರು.

ನಂತರ ತಾಲ್ಲೂಕು ಪಂಚಾಯತಿ ಇಒ ಮುನಿರಾಜು ಮಾತನಾಡಿ, ಸಂವಿಧಾನ ಜಾಗೃತಿ ಜಾಥಾ ವಿಶೇಷವಾದ ಅಭಿಯಾನ. ಈಗಾಗಲೇ ಜಾಥಾ ಕಾರ್ಯಕ್ರಮ ದೇವನಹಳ್ಳಿ, ಹೊಸಕೋಟೆ ಮುಗಿಸಿ ನಮ್ಮ ತಾಲೂಕಿಗೆ ಆಗಮಿಸಿದೆ. ಹೆಗ್ಗಡಿಹಳ್ಳಿ ಗ್ರಾ.ಪಂ. ಚುನಾಯಿತ ಪ್ರತಿನಿಧಿಗಳು, ವಿವಿಧ ಸಂಘಟನೆಗಳ‌ ಮುಖಂಡರು ಪಕ್ಷಾತೀತವಾಗಿ ಭಾಗವಹಿಸಿದ್ದಾರೆ. ಎಲ್ಲ ಪಂಚಾಯ್ತಿಗಳಲ್ಲಿ‌ ಸಂವಿಧಾನ ಜಾಗೃತಿ ಜಾಥಾ ಸಂಚರಿಸಿದ ಬಳಿಕ ದೊಡ್ಡಬಳ್ಳಾಪುರದಲ್ಲಿ ಬೃಹತ್ ಕಾರ್ಯಕ್ರಮ ನಡೆಸಿ ವಿದಾಯ ಹೇಳಲಾಗುವುದು ಎಂದು ಹೇಳಿದರು.

ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಉಮಾಪತಿ ಮಾತನಾಡಿ, ಇಂದು ಸಂವಿಧಾನ ಜಾಗೃತಿ ಜಾಥಾ ತಾಲ್ಲೂಕಿಗೆ ಬಂದಿದೆ, ಜಾಥಾದಲ್ಲಿ ತಾಲ್ಲೂಕಿನ ಎಲ್ಲ ಹಂತದ ಅಧಿಕಾರಿಗಳು ಭಾಗವಹಿಸಿದ್ದಾರೆ, ಜನರಿಂದ ಉತ್ತಮ ಸ್ಫಂದನೆ ವ್ಯಕ್ತವಾಗುತ್ತಿದೆ. ಜಾಥಾ ತಾಲೂಕಿನಲ್ಲಿ  ಒಂದು ವಾರಗಳ ಕಾಲ ಸಂಚರಿಸಿ ನೆಲಮಂಗಲ ತಾಲ್ಲೂಕಿಗೆ ಹೊರಡಲಿದೆ ಎಂದರು.

ನಂತರ ಮೆಳೆಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತದ ಮೂಲಕ ಸಂವಿಧಾನ ಜಾಗೃತಿ ಜಾಥಾ ರಥವನ್ನು ಗ್ರಾಮಸ್ಥರು ಸ್ವಾಗತಿಸಿ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದರು.

ಇದೇ ಸಂದರ್ಭದಲ್ಲಿ ಮಹಿಳೆಯರಿಂದ ರಂಗೋಲಿ, ವಿದ್ಯಾರ್ಥಿಗಳಿಗೆ ರಸ ಪ್ರಶ್ನೆ ಮತ್ತು ಪ್ರಬಂಧ ಸ್ಫರ್ಧೆ ಏರ್ಪಡಿಸಲಾಗಿತ್ತು‌. ಸ್ಫರ್ಧೆಯಲ್ಲಿ ವಿಜೇತರಾದ ಮಹಿಳೆಯರಿಗೆ ಹಾಗೂ ಮಕ್ಕಳಿಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಎನ್.ಶ್ರೀನಿವಾಸ್ ಅವರು ಬಹುಮಾನ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಹಾಗೂ ಪ್ರಜಾ ವಿಮೋಚನಾ ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಗೂಳ್ಯಹನುಮಣ್ಣ, ಮೆಳೆಕೋಟೆ ಗ್ರಾ.ಪಂ.ಅಧ್ಯಕ್ಷ ಬಿ.ಎನ್ ಶ್ರೀನಿವಾಸ್, ಜೆಡಿಎಸ್ ಮುಖಂಡ ಗೌರಿಶ್, ಕಾಂಗ್ರೆಸ್ ಜಿಲ್ಲಾ ಉಪಾದ್ಯಕ್ಷರಾದ ಎಸ್.ಡಿ ಮುನಿರಾಜು, ಜಾಗೃತಿ ಮತ್ತು ಉಸ್ತುವಾರಿ ಸದಸ್ಯ ರಾಮಣ್ಣ, ಮಂಜುನಾಥ, ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಗುರುರಾಜಪ್ಪ ಸೇರಿದಂತೆ ಹಲವು ಸಂಘ ಸಂಸ್ಥೆಗಳ ಮುಖಂಡರು, ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಹಾಗೂ ಎಲ್ಲಾ ವಾರ್ಡನ್ ಗಳು, ಸ್ವಸಹಾಯ ಸಂಘದವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 minutes ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

14 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

15 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

16 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

16 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

20 hours ago