ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಷೆ ಮಾಡಿಕೊಳ್ಳಬೇಕು.
ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.
ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಹೀಗಾಗಿ ನಿಮ್ಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.
ನಮಗಿಂತ ಬುದ್ದಿವಂತರು ಸಮಾಜದಲ್ಲಿ ಇರ್ತಾರೆ. ರೈತರು ಅವರ ಕ್ಷೇತ್ರದಲ್ಲಿ ನಮಗಿಂತ ಬುದ್ದಿವಂತರು. ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.
ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ಕೇವಲ ಅಪ್ಪ ಅಮ್ಮ ಖರ್ಚು ಮಾಡುವ ಹಣದಲ್ಲಿ ನೀವು ಅಧಿಕಾರಿಗಳಾಗಲು, ನಾವು ಶಾಸಕರು, ಸಚಿವರು ಆಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದರು.
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…
ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…
ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…