Categories: ಮೈಸೂರು

ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ- ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ- ಸಿಎಂ ಸಿದ್ದರಾಮಯ್ಯ ಕಳವಳ

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು‌ ಎಂದು ಹೇಳಿದರು.

ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ‌ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಷೆ ಮಾಡಿಕೊಳ್ಳಬೇಕು.
ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.

ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಹೀಗಾಗಿ ನಿಮ್ಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ನಮಗಿಂತ ಬುದ್ದಿವಂತರು ಸಮಾಜದಲ್ಲಿ ಇರ್ತಾರೆ. ರೈತರು ಅವರ ಕ್ಷೇತ್ರದಲ್ಲಿ ನಮಗಿಂತ ಬುದ್ದಿವಂತರು. ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ಕೇವಲ ಅಪ್ಪ ಅಮ್ಮ ಖರ್ಚು ಮಾಡುವ ಹಣದಲ್ಲಿ ನೀವು ಅಧಿಕಾರಿಗಳಾಗಲು, ನಾವು ಶಾಸಕರು, ಸಚಿವರು ಆಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

3 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

4 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

6 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

7 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

12 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

15 hours ago