ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಷೆ ಮಾಡಿಕೊಳ್ಳಬೇಕು.
ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.
ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಹೀಗಾಗಿ ನಿಮ್ಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.
ನಮಗಿಂತ ಬುದ್ದಿವಂತರು ಸಮಾಜದಲ್ಲಿ ಇರ್ತಾರೆ. ರೈತರು ಅವರ ಕ್ಷೇತ್ರದಲ್ಲಿ ನಮಗಿಂತ ಬುದ್ದಿವಂತರು. ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.
ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ಕೇವಲ ಅಪ್ಪ ಅಮ್ಮ ಖರ್ಚು ಮಾಡುವ ಹಣದಲ್ಲಿ ನೀವು ಅಧಿಕಾರಿಗಳಾಗಲು, ನಾವು ಶಾಸಕರು, ಸಚಿವರು ಆಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದರು.
ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…
" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…
ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…
ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…
ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…
ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…