Categories: ಮೈಸೂರು

ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ- ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ- ಸಿಎಂ ಸಿದ್ದರಾಮಯ್ಯ ಕಳವಳ

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು‌ ಎಂದು ಹೇಳಿದರು.

ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ‌ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಷೆ ಮಾಡಿಕೊಳ್ಳಬೇಕು.
ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.

ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಹೀಗಾಗಿ ನಿಮ್ಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ನಮಗಿಂತ ಬುದ್ದಿವಂತರು ಸಮಾಜದಲ್ಲಿ ಇರ್ತಾರೆ. ರೈತರು ಅವರ ಕ್ಷೇತ್ರದಲ್ಲಿ ನಮಗಿಂತ ಬುದ್ದಿವಂತರು. ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.

ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ಕೇವಲ ಅಪ್ಪ ಅಮ್ಮ ಖರ್ಚು ಮಾಡುವ ಹಣದಲ್ಲಿ ನೀವು ಅಧಿಕಾರಿಗಳಾಗಲು, ನಾವು ಶಾಸಕರು, ಸಚಿವರು ಆಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದರು.

Ramesh Babu

Journalist

Recent Posts

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

19 minutes ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 hour ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

14 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

14 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

14 hours ago

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

15 hours ago