ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಭಾರತೀಯ ಸಾರ್ವಜನಿಕ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು.
ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ. ಸಮಾನ ಅವಕಾಶಗಳು ಇನ್ನೂ ಸಿಕ್ಕಿಲ್ಲ. ಸಮಾನತೆ, ಭ್ರಾತೃತ್ವ ನೆಲೆಸಿಲ್ಲ. ಏಕೆ ಎನ್ನುವುದನ್ನು ನಾವು ಪ್ರಶ್ನಿಸಿಕೊಂಡು ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಕೆಎಎಸ್ ಅಧಿಕಾರಿಗಳು ಎಂದರೆ ಬುದ್ದಿವಂತರು ಎನ್ನುವ ನಂಬಿಕೆ ಇದೆ. ನಿಮ್ಮಲ್ಲಿ ಎಷ್ಟು ಮಂದಿಗೆ ವೈಚಾರಿಕತೆ ಇದೆ. ನಿಮ್ಮಲ್ಲಿ ಎಷ್ಟು ಮಂದಿ ವೈಜ್ಞಾನಿಕ ಮನೋಭಾವ ಬೆಳೆಸಿಕೊಂಡಿದ್ದೀರಿ ಎನ್ನುವುದನ್ನು ಆತ್ಮವಂಚನೆ ಮಾಡಿಕೊಳ್ಳದೆ, ಆತ್ಮವಿಮರ್ಷೆ ಮಾಡಿಕೊಳ್ಳಬೇಕು.
ವಿದ್ಯಾವಂತರೂ ಕೂಡ ಹಣೆಬರಹ, ಕರ್ಮಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡವರಿದ್ದಾರೆ. ದೇವರು ಹಾಗೆಲ್ಲಾ ತಾರತಮ್ಯ ಮಾಡಲು ಸಾಧ್ಯವೇ? ಎಂದು ಪ್ರಶ್ನೆ ಮಾಡಿದರು.
ನಾವು ರಾಜಕಾರಣಿಗಳು ಐದು ವರ್ಷಕ್ಕೊಮ್ಮೆ ಜನರ ಬಳಿ ಹೋಗಿ ರಿನೀವಲ್ ಮಾಡಿಕೊಳ್ಳಬೇಕು. ಆದರೆ ಅಧಿಕಾರಿಗಳಿಗೆ ಈ ಪರಿಸ್ಥಿತಿ ಇಲ್ಲ. ಹೀಗಾಗಿ ನಿಮ್ಮಗಳ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಸರ್ಕಾರ ರೂಪಿಸುವ ಜನಪರವಾದ ಕಾರ್ಯಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.
ನಮಗಿಂತ ಬುದ್ದಿವಂತರು ಸಮಾಜದಲ್ಲಿ ಇರ್ತಾರೆ. ರೈತರು ಅವರ ಕ್ಷೇತ್ರದಲ್ಲಿ ನಮಗಿಂತ ಬುದ್ದಿವಂತರು. ಅವಕಾಶ ಇಲ್ಲದ ಬಹಳ ಮಂದಿ ಬುದ್ದಿವಂತರು ಸಮಾಜದಲ್ಲಿ ತುಂಬಿದ್ದಾರೆ. ಅವರಿಗೆ ಅವಕಾಶ ಸಿಕ್ಕಾಗ ಶೋಷಣೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದರು.
ಸಂವಿಧಾನದ ಆಶಯಗಳು ಈಡೇರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದನ್ನು ಸರಿಯಾಗಿ ನಿರ್ವಹಿಸೋಣ, ಕರ್ತವ್ಯಲೋಪ ಆಗುವುದು ಬೇಡ. ಕೇವಲ ಅಪ್ಪ ಅಮ್ಮ ಖರ್ಚು ಮಾಡುವ ಹಣದಲ್ಲಿ ನೀವು ಅಧಿಕಾರಿಗಳಾಗಲು, ನಾವು ಶಾಸಕರು, ಸಚಿವರು ಆಗಲು ಸಾಧ್ಯವಿಲ್ಲ. ಆದ್ದರಿಂದ ಸಮಾಜದ ಋಣ ನಮ್ಮ ಮೇಲಿದೆ. ಇದನ್ನು ಮರೆಯಬಾರದು ಎಂದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…