ಸಂವಿಧಾನ ರಕ್ಷಿಸುವ ಕಾಂಗ್ರೆಸ್ ಪಕ್ಷ ನಿಮ್ಮ ಆಯ್ಕೆಯಾಗಿರಲಿ: ಮಂಜುನಾಥ್ ಅದ್ದೆ

ದೊಡ್ಡಬಳ್ಳಾಪುರ: ತತ್ವ ಸಿದ್ದಾಂತದಲ್ಲಿ ಸಮಾನತೆ ಬಯಸುವ, ಸಂವಿಧಾನ ರಕ್ಷಣೆ ಮಾಡುವ ಕಾಂಗ್ರೆಸ್ ಪಕ್ಷವನ್ನು ಪ್ರತಿಯೊಬ್ಬರು ಚುನಾವಣೆಯಲ್ಲಿ ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ತಾಲೂಕು ಉಸ್ತುವಾರಿ ಮಂಜುನಾಥ್ ಅದ್ದೆ ತಿಳಿಸಿದರು.

ಪಬ್ಲಿಕ್ ಮಿರ್ಚಿ ವೆಬ್ ನ್ಯೂಸ್ ಜೊತೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಜನರನ್ನು ಬೆತ್ತಲೆಗೊಳಿಸಲಾಗುತ್ತಿದೆ, ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಸರ್ವಾಧಿಕಾರಿ ಆಡಳಿತ ಜಾರಿಗೆ ಬರಲಿದೆ. ಸಾಮಾನ್ಯ ಪ್ರಜೆಗಳಿಗೆ ಕೇವಲ ಚೀನಾ, ಪಾಕಿಸ್ತಾನ ಎಂದು ಹೇಳಿ ಮರಳು ಮಾಡಲಾಗುತ್ತಿದೆ, ಸರ್ಕಾರದ ವಿರುದ್ಧ ಮಾತನಾಡಿದರೆ ದೇಶದ್ರೋಹಿ ಪಟ್ಟ ಕಟ್ಟಲಾಗುತ್ತದೆ, ಪ್ರಜಾಪ್ರಭುತ್ವ ಉಳಿಸಲು ಕಾಂಗ್ರೆಸ್ಸಿಗೆ ಮತ ನೀಡಿ ಎಂದರು.

ವೈದಿಕ ಸಂಸ್ಕೃತಿಯ ಬಗ್ಗೆ ಹರಿಹಾಯ್ದ ಅವರು, ಮಹಿಳೆಯರನ್ನು ಕೇವಲ ಭೋಗದ ವಸ್ತುವನ್ನಾಗಿ ನೋಡಲಾಗುತ್ತಿದೆ, ದುಡಿಯುವ ವರ್ಗದ ಮನೆಗಳಲ್ಲಿ ಮಹಿಳೆಯರ ಪ್ರಾತಿನಿಧ್ಯ ಹೆಚ್ಚು. ಸಾಂಸ್ಕೃತಿಕ ಹಾಗೂ ಸಾಮಾಜಿಕ ಭಾರ ಹೆಚ್ಚಾಗಿರುತ್ತವೆ. ಆದರೆ ವೈದಿಕ ಧರ್ಮದಲ್ಲಿ ಮಹಿಳೆಯರನ್ನು ತುಚ್ಛವಾಗಿ ನೋಡಲಾಗುತ್ತಿದೆ ಎಂದರು.

ಸಂಘ ಪರಿವಾರ ಈ ನೆಲದ ದ್ರೋಹಿ ಎಂದ ಅವರು, ಅನೇಕ ಸಂಸ್ಕ್ರತಿಗಳು ಸೇರಿ ಒಂದು ರಾಷ್ಟವಾಗಿದೆ. ಆದ್ದರಿಂದಲೇ ಗಣರಾಜ್ಯೋತ್ಸವವನ್ನು ಆಚರಿಸುವುದು, ಏಕ ಭಾರತ ಶ್ರೇಷ್ಠ ಭಾರತ ಎಂದು ಹೇಳುತ್ತಿದ್ದಾರೆ, ಮುಂದಿನ ದಿನಗಳಲ್ಲಿ ಮತ್ತೆ ಅಧಿಕಾರಕ್ಕೆ ಬಂದರೆ ವೈದಿಕ ಸಂಸ್ಕೃತಿಯನ್ನು ಹೇರುವ ಕುತಂತ್ರ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಮಾನತೆ ಸಾಧಿಸಲು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರು ಇಪ್ಪತ್ತು ಅಂಶಗಳ ಕಾರ್ಯಕ್ರಮವನ್ನು ಜಾರಿಗೆ ತಂದರು, ಏಕಸ್ವಾಮ್ಯ ಕೊನೆಗಾಣಿಸಿ ಸರ್ಕಾರಿ ಸ್ವಾಮ್ಯದ ಉದ್ದಿಮೆಗಳನ್ನು ಜಾರಿಗೆ ತಂದರು, ಆದರೆ ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ಹೂಡಿಕೆ ಹಿಂತೆಗೆತ ಮಾಡಲು ಪತ್ರಕರ್ತ ಅರುಣ್ ಶೌರಿ ಅವರನ್ನು ಸಚಿವರನ್ನಾಗಿ ನೇಮಕ ಮಾಡಿದ್ದು ದುರಾದೃಷ್ಟಕರ ಎಂದು ತಿಳಿಸಿದರು.

ಸಂವಿಧಾನವನ್ನು ಕಲ್ಯಾಣ ರಾಜ್ಯದ ಕನಸನ್ನು ಹೊತ್ತು ರಚಿಸಲಾಗಿತ್ತು. ಆದರೆ ಈಗಿನ ಬಿಜೆಪಿ ಸರ್ಕಾರದಲ್ಲಿ ಹೂಡಿಕೆಯನ್ನು ಹಿಂತೆಗೆತಗೊಳ್ಳಲಾಯಿತು, ಜಿಎಸ್ ಟಿ ಹೇರಿಕೆ, ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಹಾಗೂ ಅನಿಲ ಬಾವಿಗಳನ್ನು ಅಂಬಾನಿಗೆ ಮಾರಿದ್ದು ಕೇಂದ್ರ ಸರ್ಕಾರದ ಸಾಧನೆಯಾಗಿದೆ. 2013 ರಲ್ಲಿ 480 ರೂಪಾಯಿ ಇದ್ದ ಸಿಲಿಂಡರ್ ಬೆಲೆ ಈಗ 1150 ರೂಪಾಯಿಯಾಗಿದ್ದು ಜನರ ಸಂಪತ್ತು ಬಂಡವಾಳಶಾಹಿಗಳಿಗೆ ತಲುಪುತ್ತಿದೆ, ಜನರ ದೃಷ್ಟಿಯಲ್ಲಿ ಹೇಡಿ ಸರ್ಕಾರವಾಗಿದೆ ಎಂದು ಹೇಳಿದರು.

ರಾಷ್ಟ್ರಗೀತೆಯನ್ನು ರಚಿಸಿದ್ದ ರವೀಂದ್ರನಾಥ್ ಟ್ಯಾಗೋರ್ ಅವರು ಅಂಗ, ವಂಗ, ಕಳಿಂಗ ಮುಂತಾದ ಪ್ರಾಂತ್ಯಗಳಿಂದ ಕೂಡಿದ್ದರೂ ಬಹುತ್ವದಲ್ಲಿ ಭಾರತವನ್ನು ಕಾಣಬೇಕು, ಏಕತೆಯನ್ನು ಸಾಧಿಸಬೇಕು, ಏಕತೆಯೇ ಭಾರತದ ಬಲ ಎಂದು ನಂಬಿದ್ದರು. ಆದರೆ ಗಣಕೂಟವನ್ನು ಭಂಜಿಸಬೇಕು ಎಂಬುದು ಬಿಜೆಪಿಯ ಅಜೆಂಡಾವಾಗಿದೆ ಎಂದು ತಿಳಿಸಿದರು.

ದೇಶದ ಶೇಕಡಾ 90 ರಷ್ಟು ಜನರನ್ನು ಮತ್ತೆ ಶೋಷಣೆಗೆ ಗುರಿ ಮಾಡಬೇಕು ಎಂಬುದು ಬಿಜೆಪಿಯ ಗುರಿಯಾಗಿದೆ, ಶೇಕಡಾ 10 ಮೀಸಲಾತಿ ಅಗತ್ಯವಿರಲಿಲ್ಲ, ರೈತರು, ಹಿಂದುಳಿದ ವರ್ಗಗಳು, ಮಹಿಳೆಯರು ಹಾಗೂ ಕುಶಲಕರ್ಮಿಗಳನ್ನು ಧಿಕ್ಕರಿಸಿದ್ದಾರೆ, ಸಂಸತ್ ನಲ್ಲಿ ಮಹಿಳೆಯರಿಗೆ ರಾಜಕೀಯ ಮೀಸಲಾತಿ ನೀಡಬೇಕು ಎಂದಾಗ ವಿರೋಧಿಸಿದ್ದು ಇದೇ ಬಿಜೆಪಿಯ ಹಿರಿಯ ನಾಯಕರು ಎಂದರು.

ಬಹುತ್ವ ಭಾರತದ ಮೇಲೆ ಸದ್ದಿಲ್ಲದೆ ದಾಳಿ ನಡೆಯುವ ಕೆಲಸವಾಗುತ್ತಿದೆ, ಪಠ್ಯ ಪುಸ್ತಕ ರಚನಾ ಸಮಿತಿಗೆ ರೋಹಿತ್ ಚಕ್ರತೀರ್ಥರನ್ನು ನೇಮಕ ಮಾಡಿ ಕನ್ನಡದ ಆಸ್ಮಿತೆಯಾಗಿರುವ ಕನಕದಾಸರು, ಕುವೆಂಪು ಅವರ ಪಠ್ಯಗಳನ್ನು ಕೈಬಿಟ್ಟರು, ಬಸವಣ್ಣ ಹಾಗೂ ಅಕ್ಕಮಹಾದೇವಿ ಅವರ ವಚನಗಳನ್ನು ತಿರುಚುವ ಕೆಲಸ ಮಾಡಿದರು, ಅವರ ಬದಲಿಗೆ ಚಾಣಕ್ಯ ಹಾಗೂ ಸಾವರ್ಕರ್ ಅವರ ಪಠ್ಯ ಸೇರಿಸಲು ಮುಂದಾದರು. ಇದು ಆರ್ ಎಸ್ಎಸ್ ಸಿದ್ಧಾಂತವನ್ನು ಜಾರಿಗೊಳಿಸುವ ಹುನ್ನಾರ ಎಂದು ದೂರಿದರು.

1925 ರಲ್ಲಿ ಹುಟ್ಟಿಕೊಂಡ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಜಾತಿವ್ಯವಸ್ಥೆ ಹಾಗೂ ತಾರತಮ್ಯ ಹೆಚ್ಚಾಗಬೇಕು ಎಂದು ಬಯಸಿದ್ದಾರೆ ಆದರೆ ಎಲ್ಲರೂ ಸಮಾನರಾಗಿರಬೇಕು ಹಾಗೂ ಜಾತ್ಯತೀತ ರಾಷ್ಟ್ರ ನಿರ್ಮಾಣ ಮಾಡಬೇಕು ಎಂದು ನಮ್ಮ ಸಂವಿಧಾನ ತಿಳಿಸುತ್ತದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

Ramesh Babu

Journalist

Recent Posts

ಕುಸುಮ್ (ಸೌರ ವಿದ್ಯುತ್) ಯೋಜನೆ ಹೆಸರಲ್ಲಿ ದೇಶ ಕಾಯೋ ಯೋಧರ ಭೂಮಿಗೆ ಬೇಲಿ: ತಬ್ಬಿಬ್ಬಾದ ಯೋಧರ ಕುಟುಂಬ

ಕಳೆದ 10 ವರ್ಷಗಳಿಂದ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿಯ ಕನ್ನಮಂಗಲ ಗ್ರಾಮದ ಸರ್ವೇ ನಂಬರ್ 50ರ ಗೋಮಾಳದಲ್ಲಿ 53-57 ಅರ್ಜಿ…

6 hours ago

ಟೋಲ್ ರಸ್ತೆಯಲ್ಲಿ ಮಿತಿಮೀರಿದ ಅಪಘಾತ: ರಸ್ತೆ ಸುರಕ್ಷತೆ ಕಾಪಾಡದ ಸುಂಕವಸೂಲಿ(ಟೋಲ್) ಗುತ್ತಿಗೆದಾರರು: ಹೆದ್ದಾರಿಯಲ್ಲಿ ಕುಳಿತು ಟೋಲ್ ವಿರುದ್ಧ ಧಿಕ್ಕಾರ ಕೂಗಿದ ರೈತರು, ಸಂಘಟನೆಗಾರರು…

ರಸ್ತೆ ನಿಯಮಗಳನ್ನು ಪಾಲಿಸದೆ ವಾಹನಸವಾರರಿಗೆ ಸಮಸ್ಯೆ ಮಾಡುತ್ತಿರುವ ಟೋಲ್ ಸಿಬ್ಬಂದಿ ವಿರುದ್ದ ರಾಜ್ಯ ರೈತ ಸಂಘ ಮತ್ತು ವಿವಿಧ ಕನ್ನಡಪರ…

6 hours ago

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

7 hours ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

10 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

12 hours ago

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…

15 hours ago