Categories: ಕೋಲಾರ

ಸಂವಿಧಾನ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ-ಕೆ.ವೈ ನಂಜೇಗೌಡ

ಕೋಲಾರ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದ್ದು, ಬಡವರ ಅಭಿವೃದ್ಧಿಗಾಗಿ ರಚನೆಯಾದ ಸಂವಿಧಾನಕ್ಕೂ ಕೂಡ ಕುತ್ತು ಬಂದಿದೆ. ಅದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಲೂರು ಶಾಸಕ‌ ಕೆ.ವೈ ನಂಜೇಗೌಡ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲಾಕಾಲೇಜು ವಿಧ್ಯಾರ್ಥಿಗಳ ಸಹಯೋಗದಲ್ಲಿ ಭಾನುವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ರಸ್ತೆಯ ಚೊಕ್ಕಂಡಹಳ್ಳಿಯಿಂದ ಕೋಲಾರ ನಗರ ಮಾರ್ಗವಾಗಿ ರಾಮಸಂದ್ರ ಗಡಿಯವರಗಿನ 55 ಕಿಮೀ ಉದ್ದದ ಮಾನವ ಸರಪಳಿ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಎಲ್ಲಾ ಜಾತಿ ಧರ್ಮ ಪಕ್ಷ ಬಿಟ್ಟು ಸಂವಿಧಾನದ ಆಶಯಗಳ ಒಳಗಡೆ ನಾವು ಇದ್ದೇವೆ ಸಂವಿಧಾನ ಇದ್ದರೆ ಅಷ್ಟೇ ನಮ್ಮ ಉಳಿಗಾಲ ಅದನ್ನು ಮರೆತ ಬದುಕು ಇಲ್ಲವಾಗಿದೆ ಸಿದ್ದರಾಮಯ್ಯ ಅವರು ಒಳ್ಳೆಯ ತೀರ್ಮಾನಕ್ಕೆ ಜಿಲ್ಲೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ಮೂಲಕ ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಮತ್ತು ಶ್ರೇಷ್ಠ ಎಂದು ಸಾಬೀತು ಮಾಡಿದ್ದಾರೆ ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತಂತ್ರ್ಯ ಪಡೆದ ನಂತರ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಅಂಬೇಡ್ಕರ್ ಕೊಟ್ಟ ಸಂವಿಧಾನವೇ ಸಾಕ್ಷಿಯಾಗಿದೆ ಸಂವಿಧಾನದ ಅಡಿಯಲ್ಲಿಯೇ ಅವಕಾಶಗಳನ್ನು ಪಡೆಯಬೇಕು ಅವರ ದಾರಿಯಲ್ಲಿ ನಾವು ಎಲ್ಲರೂ ನಡೆಯಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಪ್ರಜಾಪ್ರಭುತ್ವದಿಂದ ಸ್ವಾತಂತ್ರ್ಯ, ಸಮಾನತೆ, ನ್ಯಾಯಪರತೆ ಮತ್ತು ಎಲ್ಲಾ ಮಾನವನ ಘನತೆಯನ್ನು ಕಾಪಾಡುವುದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲ ಅದು ಒಂದು ಸ್ವಾತಂತ್ರ್ಯ ಮತ್ತು ಅವಕಾಶಗಳಾಗಿದೆ ಧ್ವನಿ ಇಲ್ಲದವರಿಗೆ ಧ್ವನಿಯಾಗುತ್ತದೆ. ಸಾಮಾಜಿಕ ನ್ಯಾಯ ಕಾಪಾಡುವ ಬಲಿಷ್ಠ ವ್ಯವಸ್ಥೆ ಇದಾಗಿದ್ದು ಇದರ ರಕ್ಷಣೆ ನಮ್ಮ ಹೊಣೆಯಾಗಿದೆ ಎಂದರು‌

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಎಸ್ಪಿ ಬಿ.ನಿಖಿಲ್, ಕೆಜಿಎಫ್ ಎಸ್ಪಿ ಶಾಂತಕುಮಾರ್, ಡಿಎಫ್ಓ ಏಡುಕೊಂಡಲು, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಕುಡಾ ಅಧ್ಯಕ್ಷ ಮಹಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಅಪರ ಜಿಲ್ಲಾಧಿಕಾರಿ ಮಂಗಳಾ, ತಹಶಿಲ್ದಾರ್ ನಯನಾ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ,ಮುಂತಾದವರು ಇದ್ದರು.

Ramesh Babu

Journalist

Recent Posts

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

4 hours ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

16 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

17 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

18 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

18 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 day ago