Categories: ಕೋಲಾರ

ಸಂವಿಧಾನ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ-ಕೆ.ವೈ ನಂಜೇಗೌಡ

ಕೋಲಾರ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದ್ದು, ಬಡವರ ಅಭಿವೃದ್ಧಿಗಾಗಿ ರಚನೆಯಾದ ಸಂವಿಧಾನಕ್ಕೂ ಕೂಡ ಕುತ್ತು ಬಂದಿದೆ. ಅದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಲೂರು ಶಾಸಕ‌ ಕೆ.ವೈ ನಂಜೇಗೌಡ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲಾಕಾಲೇಜು ವಿಧ್ಯಾರ್ಥಿಗಳ ಸಹಯೋಗದಲ್ಲಿ ಭಾನುವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ರಸ್ತೆಯ ಚೊಕ್ಕಂಡಹಳ್ಳಿಯಿಂದ ಕೋಲಾರ ನಗರ ಮಾರ್ಗವಾಗಿ ರಾಮಸಂದ್ರ ಗಡಿಯವರಗಿನ 55 ಕಿಮೀ ಉದ್ದದ ಮಾನವ ಸರಪಳಿ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಎಲ್ಲಾ ಜಾತಿ ಧರ್ಮ ಪಕ್ಷ ಬಿಟ್ಟು ಸಂವಿಧಾನದ ಆಶಯಗಳ ಒಳಗಡೆ ನಾವು ಇದ್ದೇವೆ ಸಂವಿಧಾನ ಇದ್ದರೆ ಅಷ್ಟೇ ನಮ್ಮ ಉಳಿಗಾಲ ಅದನ್ನು ಮರೆತ ಬದುಕು ಇಲ್ಲವಾಗಿದೆ ಸಿದ್ದರಾಮಯ್ಯ ಅವರು ಒಳ್ಳೆಯ ತೀರ್ಮಾನಕ್ಕೆ ಜಿಲ್ಲೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ಮೂಲಕ ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಮತ್ತು ಶ್ರೇಷ್ಠ ಎಂದು ಸಾಬೀತು ಮಾಡಿದ್ದಾರೆ ಎಂದರು.

ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತಂತ್ರ್ಯ ಪಡೆದ ನಂತರ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಅಂಬೇಡ್ಕರ್ ಕೊಟ್ಟ ಸಂವಿಧಾನವೇ ಸಾಕ್ಷಿಯಾಗಿದೆ ಸಂವಿಧಾನದ ಅಡಿಯಲ್ಲಿಯೇ ಅವಕಾಶಗಳನ್ನು ಪಡೆಯಬೇಕು ಅವರ ದಾರಿಯಲ್ಲಿ ನಾವು ಎಲ್ಲರೂ ನಡೆಯಬೇಕು ಎಂಬುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.

ಪ್ರಜಾಪ್ರಭುತ್ವದಿಂದ ಸ್ವಾತಂತ್ರ್ಯ, ಸಮಾನತೆ, ನ್ಯಾಯಪರತೆ ಮತ್ತು ಎಲ್ಲಾ ಮಾನವನ ಘನತೆಯನ್ನು ಕಾಪಾಡುವುದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲ ಅದು ಒಂದು ಸ್ವಾತಂತ್ರ್ಯ ಮತ್ತು ಅವಕಾಶಗಳಾಗಿದೆ ಧ್ವನಿ ಇಲ್ಲದವರಿಗೆ ಧ್ವನಿಯಾಗುತ್ತದೆ. ಸಾಮಾಜಿಕ ನ್ಯಾಯ ಕಾಪಾಡುವ ಬಲಿಷ್ಠ ವ್ಯವಸ್ಥೆ ಇದಾಗಿದ್ದು ಇದರ ರಕ್ಷಣೆ ನಮ್ಮ ಹೊಣೆಯಾಗಿದೆ ಎಂದರು‌

ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಎಸ್ಪಿ ಬಿ.ನಿಖಿಲ್, ಕೆಜಿಎಫ್ ಎಸ್ಪಿ ಶಾಂತಕುಮಾರ್, ಡಿಎಫ್ಓ ಏಡುಕೊಂಡಲು, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಕುಡಾ ಅಧ್ಯಕ್ಷ ಮಹಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಅಪರ ಜಿಲ್ಲಾಧಿಕಾರಿ ಮಂಗಳಾ, ತಹಶಿಲ್ದಾರ್ ನಯನಾ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ,ಮುಂತಾದವರು ಇದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

11 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

12 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

13 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

17 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

23 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 days ago