ಕೋಲಾರ: ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದ್ದು, ಬಡವರ ಅಭಿವೃದ್ಧಿಗಾಗಿ ರಚನೆಯಾದ ಸಂವಿಧಾನಕ್ಕೂ ಕೂಡ ಕುತ್ತು ಬಂದಿದೆ. ಅದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಲೂರು ಶಾಸಕ ಕೆ.ವೈ ನಂಜೇಗೌಡ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ, ವಿವಿಧ ಸಂಘ ಸಂಸ್ಥೆಗಳು ಹಾಗೂ ಶಾಲಾಕಾಲೇಜು ವಿಧ್ಯಾರ್ಥಿಗಳ ಸಹಯೋಗದಲ್ಲಿ ಭಾನುವಾರ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ರಸ್ತೆಯ ಚೊಕ್ಕಂಡಹಳ್ಳಿಯಿಂದ ಕೋಲಾರ ನಗರ ಮಾರ್ಗವಾಗಿ ರಾಮಸಂದ್ರ ಗಡಿಯವರಗಿನ 55 ಕಿಮೀ ಉದ್ದದ ಮಾನವ ಸರಪಳಿ ಕಾರ್ಯಕ್ರಮದ ವೇದಿಕೆ ಕಾರ್ಯಕ್ರಮ ಹಾಗೂ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು ಎಲ್ಲಾ ಜಾತಿ ಧರ್ಮ ಪಕ್ಷ ಬಿಟ್ಟು ಸಂವಿಧಾನದ ಆಶಯಗಳ ಒಳಗಡೆ ನಾವು ಇದ್ದೇವೆ ಸಂವಿಧಾನ ಇದ್ದರೆ ಅಷ್ಟೇ ನಮ್ಮ ಉಳಿಗಾಲ ಅದನ್ನು ಮರೆತ ಬದುಕು ಇಲ್ಲವಾಗಿದೆ ಸಿದ್ದರಾಮಯ್ಯ ಅವರು ಒಳ್ಳೆಯ ತೀರ್ಮಾನಕ್ಕೆ ಜಿಲ್ಲೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ಮೂಲಕ ಪ್ರಜಾಪ್ರಭುತ್ವ ಅತ್ಯಂತ ಬಲಿಷ್ಠ ಮತ್ತು ಶ್ರೇಷ್ಠ ಎಂದು ಸಾಬೀತು ಮಾಡಿದ್ದಾರೆ ಎಂದರು.
ಪ್ರಜಾಪ್ರಭುತ್ವದಿಂದ ಸ್ವಾತಂತ್ರ್ಯ, ಸಮಾನತೆ, ನ್ಯಾಯಪರತೆ ಮತ್ತು ಎಲ್ಲಾ ಮಾನವನ ಘನತೆಯನ್ನು ಕಾಪಾಡುವುದಾಗಿದೆ. ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲ ಅದು ಒಂದು ಸ್ವಾತಂತ್ರ್ಯ ಮತ್ತು ಅವಕಾಶಗಳಾಗಿದೆ ಧ್ವನಿ ಇಲ್ಲದವರಿಗೆ ಧ್ವನಿಯಾಗುತ್ತದೆ. ಸಾಮಾಜಿಕ ನ್ಯಾಯ ಕಾಪಾಡುವ ಬಲಿಷ್ಠ ವ್ಯವಸ್ಥೆ ಇದಾಗಿದ್ದು ಇದರ ರಕ್ಷಣೆ ನಮ್ಮ ಹೊಣೆಯಾಗಿದೆ ಎಂದರು
ಈ ಸಂದರ್ಭದಲ್ಲಿ ಸಂಸದ ಮಲ್ಲೇಶ್ ಬಾಬು ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ಎಸ್ಪಿ ಬಿ.ನಿಖಿಲ್, ಕೆಜಿಎಫ್ ಎಸ್ಪಿ ಶಾಂತಕುಮಾರ್, ಡಿಎಫ್ಓ ಏಡುಕೊಂಡಲು, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ ಶಿವಕುಮಾರ್ ಕುಡಾ ಅಧ್ಯಕ್ಷ ಮಹಮದ್ ಹನೀಫ್, ಕೋಚಿಮುಲ್ ನಿರ್ದೇಶಕ ಷಂಷೀರ್, ನರಸಾಪುರ ಗ್ರಾಪಂ ಅಧ್ಯಕ್ಷ ಕೃಷ್ಣಪ್ಪ, ಅಪರ ಜಿಲ್ಲಾಧಿಕಾರಿ ಮಂಗಳಾ, ತಹಶಿಲ್ದಾರ್ ನಯನಾ, ಮುಖಂಡರಾದ ಸೀಸಂದ್ರ ಗೋಪಾಲಗೌಡ, ಚಂಜಿಮಲೆ ರಮೇಶ್, ಮೈಲಾಂಡಹಳ್ಳಿ ಮುರಳಿ,ಮುಂತಾದವರು ಇದ್ದರು.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…