ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜ್ಞಾನದ ಸಂಕೇತ- ಪ್ರಾಂಶುಪಾಲ ಡಾ. ಎಂ.ಚಿಕ್ಕಣ್ಣ

ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ಸಮಾನತೆ, ಅಸ್ಪೃಶ್ಯತೆಯ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲಿ ಒಬ್ಬರು, ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಸಂವಿಧಾನ ಶಿಲ್ಪಿ, ಭಾರತೀಯ ಸಂವಿಧಾನದ ಪಿತಾಮಹ ಎಂದು ಕರೆಯುತ್ತಾರೆ ಎಂದು ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಡಾ. ಬಿ.ಆರ್ ಅಂಬೇಡ್ಕರ್ ಓದು” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರು ಸಮಾಜ ಸುಧಾರಕ, ಶಿಕ್ಷಣ ತಜ್ಞ, ಕ್ರಿಯಾಶೀಲ ಚಿಂತನೆಗಳುಳ್ಳ ತಾತ್ವಿಕ ಪ್ರಬಂಧಕರಾಗಿದ್ದರು. ಜಾತೀಯತೆಯ ವಿರುದ್ಧ ಹೋರಾಟ ಮಾಡಿದ ಇವರು ರಾಜಕೀಯ ಮುತ್ಸದ್ಧಿಗಳು ಆಗಿದ್ದರು, ಮಹಿಳೆಯರ  ಸಬಲೀಕರಣಕ್ಕಾಗಿ ಶ್ರಮಪಟ್ಟಿದ್ದಾರೆ, ಡಾ. ಬಿ.ಆರ್ ಅಂಬೇಡ್ಕರ್ ಜ್ಞಾನದ ಸಂಕೇತ, ಮಾಹಿತಿ ಸಂಕೇತ, ಭಾರತೀಯ ಆರ್ಥಿಕತೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಶ್ರಮವಹಿಸಿದ್ದರು, ಕೈಗಾರಿಕೀಕರಣ, ಭಾರತದ ತೆರಿಗೆ ನೀತಿ, ಭಾರತೀಯ ಕೃಷಿ ಪದ್ಧತಿ, ಲಿಂಗ ಸಮಾನತೆ, ಮಾತೃತ್ವ ಮಸೂದೆ, ಭ್ರಾತೃತ್ವದ ಕುರಿತ  ವಿಚಾರಗಳ ಬಗ್ಗೆ ಚಿಂತಿಸಿದ ಮಹಾನ್ ಚೇತನ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಈಶ್ವರ್.ಕು.ಮಿರ್ಚಿ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್, ಕುವೆಂಪು ಇಂತಹ ಮಹನೀಯರ ಪುಸ್ತಕಗಳನ್ನು ಓದುವುದರಿಂದ ವ್ಯಕ್ತಿತ್ವ ವಿಕಸನ ವೃದ್ಧಿಯಾಗುತ್ತದೆ ಎಂದರು.

ಬಹುಮಾನ ವಿತರಣೆ:

ಆಶುಭಾಷಣ, ಕವನ ವಾಚನ, ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ದೀಕ್ಷಿತ, ಹೇಮ, ನಿಖಿತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಟಿ. ಮಹಾಂತೇಶಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ವಿದ್ಯಾರ್ಥಿಗಳು ಪುಸ್ತಕ ಓದುವುದನ್ನು ರೂಢಿಸಿಕೊಳ್ಳಬೇಕು, ಮೊಬೈಲ್ ಬಳಸುವುದನ್ನು ಕಡಿಮೆ ಮಾಡಬೇಕು,  ಮೊಬೈಲ್ ಒಂದು ಗ್ರಂಥ ಭಂಡಾರ ಇದ್ದ ಹಾಗೆ ಮೊಬೈಲ್ ನಿಂದ ಸಿಗುವ ಒಳ್ಳೆಯ ವಿಚಾರಗಳನ್ನು ಮಾತ್ರ ಗ್ರಹಿಕೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪರಿವರ್ತನಾ ಟ್ರಸ್ಟ್ ನ ಕಾರ್ಯದರ್ಶಿ ಮೂರ್ತಿ, ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಟಿ.ಜಿ ಮಂಜುನಾಥ, ಕನ್ನಡ ವಿಭಾಗದ ಹಿರಿಯ ಉಪನ್ಯಾಸಕರಾದ ಆನಂದ ಸೇರಿದಂತೆ ಇತರರು ಹಾಜರಿದ್ದರು.

Ramesh Babu

Journalist

Recent Posts

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

4 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

4 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

7 hours ago

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ…

10 hours ago

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ…

12 hours ago

ಮತ್ತೆ ಪೆಟ್ರೋಲ್, ಡೀಸೆಲ್ ದರ ಏರಿಕೆ: ದರ‌‌ ಪಟ್ಟಿ‌ ಇಲ್ಲಿದೆ ನೋಡಿ

ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ…

16 hours ago