ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ಸಮಾನತೆ, ಅಸ್ಪೃಶ್ಯತೆಯ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲಿ ಒಬ್ಬರು, ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಸಂವಿಧಾನ ಶಿಲ್ಪಿ, ಭಾರತೀಯ ಸಂವಿಧಾನದ ಪಿತಾಮಹ ಎಂದು ಕರೆಯುತ್ತಾರೆ ಎಂದು ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಡಾ. ಬಿ.ಆರ್ ಅಂಬೇಡ್ಕರ್ ಓದು” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರು ಸಮಾಜ ಸುಧಾರಕ, ಶಿಕ್ಷಣ ತಜ್ಞ, ಕ್ರಿಯಾಶೀಲ ಚಿಂತನೆಗಳುಳ್ಳ ತಾತ್ವಿಕ ಪ್ರಬಂಧಕರಾಗಿದ್ದರು. ಜಾತೀಯತೆಯ ವಿರುದ್ಧ ಹೋರಾಟ ಮಾಡಿದ ಇವರು ರಾಜಕೀಯ ಮುತ್ಸದ್ಧಿಗಳು ಆಗಿದ್ದರು, ಮಹಿಳೆಯರ ಸಬಲೀಕರಣಕ್ಕಾಗಿ ಶ್ರಮಪಟ್ಟಿದ್ದಾರೆ, ಡಾ. ಬಿ.ಆರ್ ಅಂಬೇಡ್ಕರ್ ಜ್ಞಾನದ ಸಂಕೇತ, ಮಾಹಿತಿ ಸಂಕೇತ, ಭಾರತೀಯ ಆರ್ಥಿಕತೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಶ್ರಮವಹಿಸಿದ್ದರು, ಕೈಗಾರಿಕೀಕರಣ, ಭಾರತದ ತೆರಿಗೆ ನೀತಿ, ಭಾರತೀಯ ಕೃಷಿ ಪದ್ಧತಿ, ಲಿಂಗ ಸಮಾನತೆ, ಮಾತೃತ್ವ ಮಸೂದೆ, ಭ್ರಾತೃತ್ವದ ಕುರಿತ ವಿಚಾರಗಳ ಬಗ್ಗೆ ಚಿಂತಿಸಿದ ಮಹಾನ್ ಚೇತನ ಎಂದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಈಶ್ವರ್.ಕು.ಮಿರ್ಚಿ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್, ಕುವೆಂಪು ಇಂತಹ ಮಹನೀಯರ ಪುಸ್ತಕಗಳನ್ನು ಓದುವುದರಿಂದ ವ್ಯಕ್ತಿತ್ವ ವಿಕಸನ ವೃದ್ಧಿಯಾಗುತ್ತದೆ ಎಂದರು.
ಬಹುಮಾನ ವಿತರಣೆ:
ಆಶುಭಾಷಣ, ಕವನ ವಾಚನ, ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ದೀಕ್ಷಿತ, ಹೇಮ, ನಿಖಿತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಟಿ. ಮಹಾಂತೇಶಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಪುಸ್ತಕ ಓದುವುದನ್ನು ರೂಢಿಸಿಕೊಳ್ಳಬೇಕು, ಮೊಬೈಲ್ ಬಳಸುವುದನ್ನು ಕಡಿಮೆ ಮಾಡಬೇಕು, ಮೊಬೈಲ್ ಒಂದು ಗ್ರಂಥ ಭಂಡಾರ ಇದ್ದ ಹಾಗೆ ಮೊಬೈಲ್ ನಿಂದ ಸಿಗುವ ಒಳ್ಳೆಯ ವಿಚಾರಗಳನ್ನು ಮಾತ್ರ ಗ್ರಹಿಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪರಿವರ್ತನಾ ಟ್ರಸ್ಟ್ ನ ಕಾರ್ಯದರ್ಶಿ ಮೂರ್ತಿ, ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಟಿ.ಜಿ ಮಂಜುನಾಥ, ಕನ್ನಡ ವಿಭಾಗದ ಹಿರಿಯ ಉಪನ್ಯಾಸಕರಾದ ಆನಂದ ಸೇರಿದಂತೆ ಇತರರು ಹಾಜರಿದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…