ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಜ್ಞಾನದ ಸಂಕೇತ- ಪ್ರಾಂಶುಪಾಲ ಡಾ. ಎಂ.ಚಿಕ್ಕಣ್ಣ

ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ಸಮಾನತೆ, ಅಸ್ಪೃಶ್ಯತೆಯ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಲ್ಲಿ ಒಬ್ಬರು, ಭಾರತದ ಸಂವಿಧಾನವನ್ನು ರಚಿಸಿದ ಇವರನ್ನು ಸಂವಿಧಾನ ಶಿಲ್ಪಿ, ಭಾರತೀಯ ಸಂವಿಧಾನದ ಪಿತಾಮಹ ಎಂದು ಕರೆಯುತ್ತಾರೆ ಎಂದು ಶ್ರೀ ದೇವರಾಜ ಅರಸ್ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ.ಎಂ ಚಿಕ್ಕಣ್ಣ ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಡಾ. ಬಿ.ಆರ್ ಅಂಬೇಡ್ಕರ್ ಓದು” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರು ಸಮಾಜ ಸುಧಾರಕ, ಶಿಕ್ಷಣ ತಜ್ಞ, ಕ್ರಿಯಾಶೀಲ ಚಿಂತನೆಗಳುಳ್ಳ ತಾತ್ವಿಕ ಪ್ರಬಂಧಕರಾಗಿದ್ದರು. ಜಾತೀಯತೆಯ ವಿರುದ್ಧ ಹೋರಾಟ ಮಾಡಿದ ಇವರು ರಾಜಕೀಯ ಮುತ್ಸದ್ಧಿಗಳು ಆಗಿದ್ದರು, ಮಹಿಳೆಯರ  ಸಬಲೀಕರಣಕ್ಕಾಗಿ ಶ್ರಮಪಟ್ಟಿದ್ದಾರೆ, ಡಾ. ಬಿ.ಆರ್ ಅಂಬೇಡ್ಕರ್ ಜ್ಞಾನದ ಸಂಕೇತ, ಮಾಹಿತಿ ಸಂಕೇತ, ಭಾರತೀಯ ಆರ್ಥಿಕತೆಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಶ್ರಮವಹಿಸಿದ್ದರು, ಕೈಗಾರಿಕೀಕರಣ, ಭಾರತದ ತೆರಿಗೆ ನೀತಿ, ಭಾರತೀಯ ಕೃಷಿ ಪದ್ಧತಿ, ಲಿಂಗ ಸಮಾನತೆ, ಮಾತೃತ್ವ ಮಸೂದೆ, ಭ್ರಾತೃತ್ವದ ಕುರಿತ  ವಿಚಾರಗಳ ಬಗ್ಗೆ ಚಿಂತಿಸಿದ ಮಹಾನ್ ಚೇತನ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಈಶ್ವರ್.ಕು.ಮಿರ್ಚಿ ಪ್ರಾಸ್ತಾವಿಕವಾಗಿ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್, ಕುವೆಂಪು ಇಂತಹ ಮಹನೀಯರ ಪುಸ್ತಕಗಳನ್ನು ಓದುವುದರಿಂದ ವ್ಯಕ್ತಿತ್ವ ವಿಕಸನ ವೃದ್ಧಿಯಾಗುತ್ತದೆ ಎಂದರು.

ಬಹುಮಾನ ವಿತರಣೆ:

ಆಶುಭಾಷಣ, ಕವನ ವಾಚನ, ಪ್ರಬಂಧ ಸ್ಪರ್ಧೆಗಳಲ್ಲಿ ವಿಜೇತರಾದ ದೀಕ್ಷಿತ, ಹೇಮ, ನಿಖಿತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಟಿ. ಮಹಾಂತೇಶಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ವಿದ್ಯಾರ್ಥಿಗಳು ಪುಸ್ತಕ ಓದುವುದನ್ನು ರೂಢಿಸಿಕೊಳ್ಳಬೇಕು, ಮೊಬೈಲ್ ಬಳಸುವುದನ್ನು ಕಡಿಮೆ ಮಾಡಬೇಕು,  ಮೊಬೈಲ್ ಒಂದು ಗ್ರಂಥ ಭಂಡಾರ ಇದ್ದ ಹಾಗೆ ಮೊಬೈಲ್ ನಿಂದ ಸಿಗುವ ಒಳ್ಳೆಯ ವಿಚಾರಗಳನ್ನು ಮಾತ್ರ ಗ್ರಹಿಕೆ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪರಿವರ್ತನಾ ಟ್ರಸ್ಟ್ ನ ಕಾರ್ಯದರ್ಶಿ ಮೂರ್ತಿ, ಕಾಲೇಜಿನ ಇಂಗ್ಲೀಷ್ ವಿಭಾಗದ ಮುಖ್ಯಸ್ಥರಾದ ಟಿ.ಜಿ ಮಂಜುನಾಥ, ಕನ್ನಡ ವಿಭಾಗದ ಹಿರಿಯ ಉಪನ್ಯಾಸಕರಾದ ಆನಂದ ಸೇರಿದಂತೆ ಇತರರು ಹಾಜರಿದ್ದರು.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

5 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

16 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

17 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

17 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

19 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

23 hours ago