ಸಂಸತ್ ಭವನದ‌ ಮೇಲೆ ಆಗಂತುಕರ ಪ್ರವೇಶ ವಿಚಾರ- ಭದ್ರತಾ ವ್ಯವಸ್ಥೆಯ ಲೋಪ- ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು- ಸಿಎಂ ಸಿದ್ದರಾಮಯ್ಯ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದಲ್ಲಿ ಇಂದು ನಡೆದಿರುವ ಘಟನೆ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದರು.

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…

4 hours ago

ಕಾಲೇಜಿನಿಂದ ಸಹೋದರನನ್ನು ಮನೆಗೆ ಕರೆದುಕೊಂಡು ಬರುವಾಗ ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ನಲ್ಲಿದ್ದ ಅಣ್ಣ ಸಾವು, ತಮ್ಮನಿಗೆ ಗಾಯ

ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…

6 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ರೌಂಡ್ಸ್​

ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…

7 hours ago

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

23 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

24 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 day ago