ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದಲ್ಲಿ ಇಂದು ನಡೆದಿರುವ ಘಟನೆ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದರು.
ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.
ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ತಿಳಿಸಿದ್ದಾರೆ.
ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…
ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…
ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…
2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…