ಸಂಸತ್ ಭವನದ‌ ಮೇಲೆ ಆಗಂತುಕರ ಪ್ರವೇಶ ವಿಚಾರ- ಭದ್ರತಾ ವ್ಯವಸ್ಥೆಯ ಲೋಪ- ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು- ಸಿಎಂ ಸಿದ್ದರಾಮಯ್ಯ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದಲ್ಲಿ ಇಂದು ನಡೆದಿರುವ ಘಟನೆ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದರು.

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

17 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

20 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

21 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

24 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

2 days ago