ಸಂಸತ್ ಭವನದ‌ ಮೇಲೆ ಆಗಂತುಕರ ಪ್ರವೇಶ ವಿಚಾರ- ಭದ್ರತಾ ವ್ಯವಸ್ಥೆಯ ಲೋಪ- ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು- ಸಿಎಂ ಸಿದ್ದರಾಮಯ್ಯ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದಲ್ಲಿ ಇಂದು ನಡೆದಿರುವ ಘಟನೆ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದರು.

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago