ಸಂಸತ್ ಭವನದ‌ ಮೇಲೆ ಆಗಂತುಕರ ಪ್ರವೇಶ ವಿಚಾರ- ಭದ್ರತಾ ವ್ಯವಸ್ಥೆಯ ಲೋಪ- ನಿಷ್ಪಕ್ಷಪಾತ ತನಿಖೆ ನಡೆಸಿ ಸತ್ಯವನ್ನು ಜನರ ಮುಂದಿಡಬೇಕು- ಸಿಎಂ ಸಿದ್ದರಾಮಯ್ಯ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದಲ್ಲಿ ಇಂದು ನಡೆದಿರುವ ಘಟನೆ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ. ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವ ಅಮಿತ್ ಶಾ ಅವರ ಕರ್ತವ್ಯವಾಗಿದೆ ಎಂದು‌ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದರು.

ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ ಎಂದು ಹೇಳಿದ್ದಾರೆ.

ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತದೆಯಾ? ಎಂಬಿತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರದ್ದಾಗಿದೆ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

11 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

12 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago