ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯಲ್ಲಿ ಅಸಭ್ಯತನ ಇಲ್ಲ. ಈ ಹಿಂದೆ ಸಿದ್ದರಾಮಯ್ಯ ಸಹ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೀಳಾಗಿ ಹಾಗೂ ಏಕವಚನದಲ್ಲಿ ಮಾತನಾಡಿದ್ದಾರೆ. ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಯುತ್ತಿರುವ ಕಾಂಗ್ರೆಸ್ಸಿಗರಿಗೆ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಬಗ್ಗೆ ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಕದಂಬ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಜಿ.ಎನ್.ಪ್ರದೀಪ್ ಹೇಳಿದರು.
ನಗರದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು, ಸಚಿವರು ಸರ್ಕಾರದ ನ್ಯೂನತೆಗಳನ್ನು ಮುಚ್ಚಿಕೊಳ್ಳುವ ಹಾಗೂ ಸರ್ಕಾರದ ದಿವಾಳಿತನವನ್ನು ಮರೆಮಾಚುವ ಸಲುವಾಗಿ ಜನರ ಗಮನ ಬೇರೆಡೆಗೆ ಸೆಳೆಯಲು ಈ ರೀತಿಯ ವಿವಾದ ಸೃಷ್ಟಿಸಿದ್ದಾರೆ ಎಂದು ದೂರಿದರು.
ಅನಂತ ಕುಮಾರ್ ಹೆಗಡೆ ಅವರು ಸುಸಂಸ್ಕೃತ, ನೇರ ನಿಷ್ಠುರವಾಗಿ ಮಾತನಾಡುವ ವ್ಯಕ್ತಿ. ಅವರ ಹೇಳಿಕೆಯನ್ನ ವಿವಾದ ಎಂದು ಬಿಂಬಿಸಲಾಗುತ್ತಿದೆ. ಧರ್ಮ, ಸಂಸ್ಕೃತಿಯ ಬಗ್ಗೆ ಮಾತನಾಡಿದರೆ ಅಸಭ್ಯ ಹೇಗಾಗುತ್ತದೆ? ಬಿಜೆಪಿ ಮೌನಕ್ಕೆ ಯತ್ನಾಳ್ ಹೇಳಿಕೆಯ ಅನುಮಾನಗಳು ಸೂಕ್ತವಾಗುವ ಲಕ್ಷಣಗಳಿವೆ ಎಂದರು.
ಈ ವೇಳೆ ಕದಂಬ ಬ್ರಿಗೇಡ್ ನ ಸಿ.ಕೆ.ದಯಾನಂದ, ಸುರೇಶ್, ಕನಕರಾಜ್, ಶಿವರಾಜ್, ಆಟೋ ರಮೇಶ್ ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ…
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…