ಸಂಸದ ಅನಂತಕುಮಾರ್ ಹೆಗಡೆ ಹೇಳಿಕೆಯಲ್ಲಿ ಅಸಭ್ಯತನ ಇಲ್ಲ- ಕದಂಬ ಬ್ರಿಗೇಡ್ ಅಧ್ಯಕ್ಷ ಜಿ.ಎನ್ ಪ್ರದೀಪ್ ಸಮರ್ಥನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯಲ್ಲಿ ಅಸಭ್ಯತನ ಇಲ್ಲ. ಈ ಹಿಂದೆ ಸಿದ್ದರಾಮಯ್ಯ ಸಹ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೀಳಾಗಿ ಹಾಗೂ ಏಕವಚನದಲ್ಲಿ ಮಾತನಾಡಿದ್ದಾರೆ. ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಯುತ್ತಿರುವ  ಕಾಂಗ್ರೆಸ್ಸಿಗರಿಗೆ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಬಗ್ಗೆ ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಕದಂಬ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಜಿ.ಎನ್.ಪ್ರದೀಪ್ ಹೇಳಿದರು.

ನಗರದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು, ಸಚಿವರು ಸರ್ಕಾರದ ನ್ಯೂನತೆಗಳನ್ನು ಮುಚ್ಚಿಕೊಳ್ಳುವ ಹಾಗೂ ಸರ್ಕಾರದ ದಿವಾಳಿತನವನ್ನು ಮರೆಮಾಚುವ ಸಲುವಾಗಿ ಜನರ ಗಮನ ಬೇರೆಡೆಗೆ ಸೆಳೆಯಲು ಈ ರೀತಿಯ ವಿವಾದ ಸೃಷ್ಟಿಸಿದ್ದಾರೆ ಎಂದು ದೂರಿದರು.

ಅನಂತ ಕುಮಾರ್ ಹೆಗಡೆ ಅವರು ಸುಸಂಸ್ಕೃತ, ನೇರ ನಿಷ್ಠುರವಾಗಿ ಮಾತನಾಡುವ ವ್ಯಕ್ತಿ. ಅವರ ಹೇಳಿಕೆಯನ್ನ ವಿವಾದ ಎಂದು ಬಿಂಬಿಸಲಾಗುತ್ತಿದೆ. ಧರ್ಮ, ಸಂಸ್ಕೃತಿಯ ಬಗ್ಗೆ ಮಾತನಾಡಿದರೆ ಅಸಭ್ಯ ಹೇಗಾಗುತ್ತದೆ? ಬಿಜೆಪಿ ಮೌನಕ್ಕೆ ಯತ್ನಾಳ್ ಹೇಳಿಕೆಯ ಅನುಮಾನಗಳು ಸೂಕ್ತವಾಗುವ ಲಕ್ಷಣಗಳಿವೆ ಎಂದರು.

ಈ ವೇಳೆ ಕದಂಬ ಬ್ರಿಗೇಡ್ ನ ಸಿ.ಕೆ.ದಯಾನಂದ, ಸುರೇಶ್, ಕನಕರಾಜ್, ಶಿವರಾಜ್, ಆಟೋ ರಮೇಶ್ ಇದ್ದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

4 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

5 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

20 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago