ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಂಸದ ಅನಂತ ಕುಮಾರ್ ಹೆಗಡೆ ಹೇಳಿಕೆಯಲ್ಲಿ ಅಸಭ್ಯತನ ಇಲ್ಲ. ಈ ಹಿಂದೆ ಸಿದ್ದರಾಮಯ್ಯ ಸಹ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಕೀಳಾಗಿ ಹಾಗೂ ಏಕವಚನದಲ್ಲಿ ಮಾತನಾಡಿದ್ದಾರೆ. ಗಾಜಿನ ಮನೆಯಲ್ಲಿ ನಿಂತು ಕಲ್ಲು ಹೊಡೆಯುತ್ತಿರುವ ಕಾಂಗ್ರೆಸ್ಸಿಗರಿಗೆ ಅನಂತಕುಮಾರ್ ಹೆಗಡೆ ಅವರ ಹೇಳಿಕೆ ಬಗ್ಗೆ ಪ್ರಶ್ನಿಸುವ ನೈತಿಕತೆ ಇಲ್ಲ ಎಂದು ಕದಂಬ ಬ್ರಿಗೇಡ್ ಸಂಸ್ಥಾಪಕ ಅಧ್ಯಕ್ಷ ಜಿ.ಎನ್.ಪ್ರದೀಪ್ ಹೇಳಿದರು.
ನಗರದ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು, ಸಚಿವರು ಸರ್ಕಾರದ ನ್ಯೂನತೆಗಳನ್ನು ಮುಚ್ಚಿಕೊಳ್ಳುವ ಹಾಗೂ ಸರ್ಕಾರದ ದಿವಾಳಿತನವನ್ನು ಮರೆಮಾಚುವ ಸಲುವಾಗಿ ಜನರ ಗಮನ ಬೇರೆಡೆಗೆ ಸೆಳೆಯಲು ಈ ರೀತಿಯ ವಿವಾದ ಸೃಷ್ಟಿಸಿದ್ದಾರೆ ಎಂದು ದೂರಿದರು.
ಅನಂತ ಕುಮಾರ್ ಹೆಗಡೆ ಅವರು ಸುಸಂಸ್ಕೃತ, ನೇರ ನಿಷ್ಠುರವಾಗಿ ಮಾತನಾಡುವ ವ್ಯಕ್ತಿ. ಅವರ ಹೇಳಿಕೆಯನ್ನ ವಿವಾದ ಎಂದು ಬಿಂಬಿಸಲಾಗುತ್ತಿದೆ. ಧರ್ಮ, ಸಂಸ್ಕೃತಿಯ ಬಗ್ಗೆ ಮಾತನಾಡಿದರೆ ಅಸಭ್ಯ ಹೇಗಾಗುತ್ತದೆ? ಬಿಜೆಪಿ ಮೌನಕ್ಕೆ ಯತ್ನಾಳ್ ಹೇಳಿಕೆಯ ಅನುಮಾನಗಳು ಸೂಕ್ತವಾಗುವ ಲಕ್ಷಣಗಳಿವೆ ಎಂದರು.
ಈ ವೇಳೆ ಕದಂಬ ಬ್ರಿಗೇಡ್ ನ ಸಿ.ಕೆ.ದಯಾನಂದ, ಸುರೇಶ್, ಕನಕರಾಜ್, ಶಿವರಾಜ್, ಆಟೋ ರಮೇಶ್ ಇದ್ದರು.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…