ದೊಡ್ಡಬಳ್ಳಾಪುರ : ವಿವಿಧತೆಯಲ್ಲಿ ಏಕತೆತನ್ನು ಸಾರುವ ಭಾರತ ದೇಶದ ವೈಶಿಷ್ಠತೆ, ದೇಶದ ವಿವಿಧ ರಾಜ್ಯಗಳ ವಿಭಿನ್ನ ಸಂಸ್ಕೃತಿ ಮತ್ತು ಆಚರಣೆಗಳನ್ನು ತಿಳಿಯುವ ಕಾರಣಕ್ಕೆ ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರು ಈಶಾನ್ಯ ರಾಜ್ಯಗಳಾದ ಅಸ್ಸಾಂ ಮತ್ತು ಮೇಘಾಲಯ ಪ್ರವಾಸದಲ್ಲಿದ್ದಾರೆ.
ದೊಡ್ಡಬಳ್ಳಾಪುರ ಕಾಂಗ್ರೆಸ್ ಮುಖಂಡರಾದ ಕೆಪಿಸಿಸಿ ಜಿಲ್ಲಾ ವಕ್ತಾರರಾದ ಜಿ.ಲಕ್ಷ್ಮೀಪತಿ, ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ರಂಗಪ್ಪ, ಆರ್.ವಿ.ಮಹೇಶ್ ಕುಮಾರ್, ಭೂ ಮಂಜೂರಾತಿ ಸದಸ್ಯರಾದ ಶ್ರೀಧರ್ ಗಂಗಸಂದ್ರ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸಂದೀಪ್ ಪಾಟೀಲ್, ಮಾಜಿ ತಾಲೂಕು ಪಂಚಾಯತಿ ಅಧ್ಯಕ್ಷ ಲಾವಣ್ಯ ನಾಗರಾಜ್ ಮತ್ತು ತಂಡದ ಸದಸ್ಯರು ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿದ್ದಾರೆ.
ಅಸ್ಸಾಂ, ಮೇಘಾಲಯ ರಾಜ್ಯದಲ್ಲಿನ ವಿಶೇಷ ದೇವಾಲಯ ಮತ್ತು ಪ್ರವಾಸಿ ತಾಣಗಳಿಗೆ ಕಾಂಗ್ರೆಸ್ ಮುಖಂಡರು ಭೇಟಿ ನೀಡಿದ್ದು, ಅಲ್ಲಿನ ಆಹಾರ ಪದ್ಧತಿ, ವೇಷ ಭೂಷಣ, ಕಲೆ, ಸಂಸ್ಕೃತಿಗಳನ್ನ ಅರಿಯುವ ಕಾರಣಕ್ಕೆ ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವುದ್ದಾಗಿ ಹೇಳಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…