Categories: ಲೇಖನ

ಸಂಸ್ಕೃತಿ – ವಿಕೃತಿ….. ಆದರ್ಶ ಮತ್ತು ವಾಸ್ತವ….

ಮಕ್ಕಳನ್ನೇ ಕೊಲ್ಲುವ ಮರ್ಯಾದೆ ಹತ್ಯೆಗಳು,

ಪ್ರೀತಿಸಿ ಮದುವೆಯಾಗುವ ಬೇರೆ ಬೇರೆ ಜಾತಿಯ ಪ್ರೇಮಿಗಳನ್ನು ಕೊಂದು
ಜೈಲಿಗೆ ಹೋಗುವ ಸಂಬಂಧಿಗಳೇ ಧೀರರು – ಗೌರವಸ್ತರು – ಮರ್ಯಾದಸ್ತರು,

ಮದುವೆ ಮಂಟಪದಲ್ಲಿ ದುಬಾರಿ ಕಾರನ್ನು ಬಹಿರಂಗವಾಗಿ ಪ್ರದರ್ಶಿಸಿ ವರದಕ್ಷಿಣೆಯನ್ನು
ಕೊಡುವವರು ತಮ್ಮ ಮನೆತನದ ಹೆಚ್ಚುಗಾರಿಕೆ – ಗೌರವ ಕಾಪಾಡುವ ಮಾನಸ್ಥರು,

ಹಣ – ಹೆಂಡ ಹಂಚಿ – ತಲೆಹಿಡಿದು ಟಿಕೆಟ್ ಗಿಟ್ಟಿಸಿ – ಚುನಾವಣೆಯಲ್ಲಿ ಗೆದ್ದು
ರಾಜಕೀಯ ಸ್ಥಾನಮಾನ ಪಡೆಯುವವರು ಆದರ್ಶ ವ್ಯಕ್ತಿಗಳು,

ಮೂರೂ ಬಿಟ್ಟು ಅತ್ತೆ ಮನೆಗೆ ಹೋಗಿ ಬಂದಂತೆ ಜೈಲಿಗೆ ಹೋಗಿ ಬಂದರೂ, ಏನೂ ಆಗಿಲ್ಲದಂತೆ ಛಲ ಬಿಡದೆ ಮತ್ತೆ ಅಧಿಕಾರ ಸ್ಥಾಪಿಸುವ ರೌಡಿಗಳು – ಭ್ರಷ್ಟರು ನಮಗೆ ಪ್ರೇರಣೆ,

ಏನಾದರೂ ಮಾಡು, ಹೇಗಾದರೂ ಮಾಡು, ಒಟ್ಟಿನಲ್ಲಿ ಹಣ ಮಾಡು ಎಂದು ಬೋಧಿಸಿ, ಅದೇ ರೀತಿ ದುಡ್ಡು, ದೌಲತ್ತು ಪ್ರದರ್ಶಿಸುವವರು ನಮಗೆ ಮಾದರಿ,

ಧರ್ಮಾಧಿಕಾರಿಯಾಗು‌ – ಜಾತಿನಾಯಕನಾಗು – ಭ್ರಷ್ಟ ಅಧಿಕಾರಿಯಾಗು – ಏನಾದರೂ ಆಗು, ಮೊದಲು ಹಣ ಮಾಡುವ ಜನಪ್ರಿಯ ನಾಯಕನಾಗು ಎನ್ನುವವರೇ ನಮಗೆ ಸ್ಪೂರ್ತಿ,

ತಲೆ ಹಿಡಿದರೂ ಪರವಾಗಿಲ್ಲ – ತಲೆ ಹೊಡೆದರೂ ಪರವಾಗಿಲ್ಲ –
ಕಾಲಿಡಿದರೂ ಪರವಾಗಿಲ್ಲ – ಜುಟ್ಟಿಡಿದರೂ ಪರವಾಗಿಲ್ಲ –
ಕೈ ಮುಗಿದರೂ ಪರವಾಗಿಲ್ಲ – ಕಾಲ್ ಮುರಿದರೂ ಪರವಾಗಿಲ್ಲ,
ಒಟ್ಟಿನಲ್ಲಿ ದೊಡ್ಡ ನಾಯಕನಾಗು ನೀನೆ ನಮಗೆ ಆದರ್ಶ,

ಸುಳ್ಳಾದರೂ ಹೇಳು – ಅಸಹ್ಯವನ್ನಾದರೂ ತೋರಿಸು,
ರಕ್ತವನ್ನಾದರೂ ಪ್ರದರ್ಶಿಸು – ಮೌಢ್ಯವನ್ನಾದರೂ ವಿಜೃಂಭಿಸು,
ಅನೈತಿಕವಾದರೂ ಆಗಿರಲಿ – ಅಸಭ್ಯವಾದರೂ ಆಗಿರಲಿ,
ಒಟ್ಟಿನಲ್ಲಿ ನೀನೇ ನಂಬರ್‌ ಒನ್ ಚಾನಲ್ ಆಗಿರಬೇಕು,

ಎಚ್ಚೆತ್ತುಕೊಳ್ಳೋಣ,

ನಾವು ಪ್ರಾಣಕ್ಕಿಂತ ಹೆಚ್ಚು ಪ್ರೀತಿಸುವ ನಮ್ಮ ಮಕ್ಕಳಿಗಾಗಿ,
ಒಂದು ಉತ್ತಮ ವಾತಾವರಣ ನಿರ್ಮಿಸಿ ಕೊಡೋಣ,
ಪಾಪ ಮಕ್ಕಳು ಈಗಿರುವ ವ್ಯವಸ್ಥೆಯಲ್ಲಿ ನರಕಯಾತನೆ ಅನುಭವಿಸುವುದು ಬೇಡ.

ಅದಕ್ಕಾಗಿ,

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು,

ಬ್ರಾಹ್ಮಣರ ಎಲ್ಲಾ ಅಗ್ರಹಾರಗಳನ್ನು ನಾಶಪಡಿಸಬೇಕು. ಊರ ಒಳಗಿನ ಎಲ್ಲರ ಜೊತೆ ಸಹಜವಾಗಿ ಬದುಕುವಂತೆ ಮಾಡಬೇಕು,

ಹಾಗೆಯೇ,
ಜಾತಿಗಳ ಆಧಾರದ ಮೇಲೆ ಅಸ್ತಿತ್ವದಲ್ಲಿರುವ ಎಲ್ಲಾ ಕೇರಿ, ಹಟ್ಟಿ, ಬೀದಿ, ಓಣಿ ಮುಂತಾದ ಹೆಸರುಗಳಿಂದ ಕರೆಯಲ್ಪಡುವ ಪ್ರದೇಶಗಳನ್ನು ನಾಶಪಡಿಸಿ ಅದರ ನೆನಪೂ ಉಳಿಯದಂತೆ ಮಾಡಬೇಕು,

ಅದೇರೀತಿ ,
ಒಂದು ಪ್ರತ್ಯೇಕ ಸ್ಥಳಗಳಲ್ಲಿ ಒಟ್ಟಾಗಿ ಗುಂಪು ಗುಂಪಾಗಿ ವಾಸಿಸುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ, ಭೌದ್ದರು, ಸಿಖ್ಖರು, ಪಾರ್ಸಿಗಳು ಮುಂತಾದವರನ್ನು ಅಲ್ಲಿಂದ ಬೇರ್ಪಡಿಸಿ ಊರ ಒಳಗೆ ಚದುರಿದಂತೆ ವಾಸಿಸಲು ಅವಕಾಶ ಕಲ್ಪಿಸಿಕೊಡಬೇಕು‌,

ಜಾತಿ ಹೆಸರೇಳುವುದು ಅವಮಾನ ಅನಾಗರಿಕತೆ,
” ಭಾರತೀಯತೆ ” ಒಂದು ಹೆಮ್ಮೆ ಎಂದು ಹೇಳಲು ಯುವ ಜನಾಂಗವನ್ನು ಪ್ರೇರೇಪಿಸಬೇಕು,

ಜಾತಿ, ಧರ್ಮ, ನಂಬಿಕೆ, ಸಂಪ್ರದಾಯಗಳಿಗಿಂತ ನಾಗರಿಕ ಪ್ರಜ್ಞೆ ಆಧುನಿಕ ಸಮಾಜದ ಮುಖ್ಯ ಗುಣಲಕ್ಷಣಗಳು ಎಂದು ಭಾವಿಸುವಂತಾಗಬೇಕು,

ಯಾರಾದರೂ ಸ್ವಯಂ ಇಚ್ಛೆಯಿಂದ ಅಧೀಕೃತ ಜಾತಿಯ ಕಾಲಂನಲ್ಲಿ ಜಾತಿಯ ಹೆಸರು ನಮೂದಿಸದೆ
” ಭಾರತೀಯ ” ಎಂದು ಬರೆಯಲು ಅವಕಾಶ ಕಲ್ಪಿಸಬೇಕು ಮತ್ತು ಅವರಿಗೆ ಏನಾದರೂ ಒಂದಷ್ಟು ಪ್ರೋತ್ಸಾಹಕ ಕೊಡುಗೆ ನೀಡಬೇಕು,

ಅಂತರ್ಜಾತೀಯ ವಿವಾಹವಾಗಿ ೧೫ ವರ್ಷ ಪೂರೈಸಿದ ಕುಟುಂಬಕ್ಕೆ, ಕೌಟುಂಬಿಕ ನ್ಯಾಯಾಲಯ ಇದನ್ನು ದೃಢಪಡಿಸಿದಲ್ಲಿ
ಅವರ ಕುಟುಂಬಕ್ಕೆ ಜೀವನ ಪರ್ಯಂತ ಯಾವುದೇ ಆಸ್ಪತ್ರೆಗಳಲ್ಲಿ ಉಚಿತ ಆರೋಗ್ಯ ಸೇವೆ ಸರ್ಕಾರ ಒದಗಿಸಬೇಕು,

ಅಸ್ಪೃಶ್ಯತೆ ಆಚರಣೆ ದೇಶ ದ್ರೋಹಕ್ಕೆ ಸಮಾನ ಎಂದು ಘೋಷಿಸಬೇಕು,
ಪಂಕ್ತಿಬೇಧ, ಜಾತಿಯ ಆಧಾರದ ಪಕ್ಷಪಾತ, ಪ್ರವೇಶ ನಿಷೇಧ, ವ್ಯಕ್ತಿಯ
ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಆಚರಣೆ ಇರುವ ಎಲ್ಲಾ ದೇವ ಮಂದಿರಗಳನ್ನು ಸರ್ಕಾರ ವಶಕ್ಕೆ ಪಡೆಯಬೇಕು,

ಎಲ್ಲಾ ಮಂದಿರ, ಮಸೀದಿ, ಚರ್ಚು, ಗುರುದ್ವಾರ, ಭೌದ್ದ, ಜೈನ, ಪಾರ್ಸಿ ಮಂದಿರಗಳಲ್ಲಿ ಎಲ್ಲರಿಗೂ ಮುಕ್ತ ಪ್ರವೇಶ ಕಲ್ಪಿಸಬೇಕು.
ಅಲ್ಲಿ ನಂಬಿಕೆಯ ಆಚರಣೆಗಳಿಗಿಂತ ಧ್ಯಾನ ಕೇಂದ್ರಗಳಂತೆ ಕಾರ್ಯನಿರ್ವಹಿಸಲು ಹೆಚ್ಚಿನ ಆಧ್ಯತೆ ಕೊಡಬೇಕು,

ಹೆಸರುಗಳ ಮುಂದೆ ಜಾತಿ ಸೂಚಕ ಪದವನ್ನು ನಿಷೇಧಿಸಬೇಕು,

ಹೊಟ್ಟೆಯಲ್ಲಿರುವ ಮಗುವಿನ ಲಿಂಗ ಪರೀಕ್ಷೆ ನಿಷೇಧಿಸಿದಂತೆ ಜಾತಿಯನ್ನು ಮದುವೆ, ಚುನಾವಣೆ ಮುಂತಾದ ಸಾರ್ವಜನಿಕ ಕಾರ್ಯಗಳಲ್ಲಿ ಬಹಿರಂಗಪಡಿಸದಂತೆ ನಿಷೇಧವಿರಬೇಕು.

ಜಾತಿ ಹೆಸರಿನ ಮತ್ತು ಜಾತಿ ಆಧಾರಿತ ಸಂಘಟನೆಗಳನ್ನು ನಿಷೇಧಿಸಬೇಕು. ಅದಕ್ಕೆ ಬದಲಾಗಿ ಕ್ರೀಡಾ, ಸಾಂಸ್ಕೃತಿಕ, ಸಾಹಿತ್ಯಕ, ಸಾಹಸ ಸಂಘಟನೆಗಳನ್ನು ಪ್ರೋತ್ಸಾಹಿಸಬೇಕು,

ಅದಕ್ಕಾಗಿ ಶಿಕ್ಷಣ ಕ್ಷೇತ್ರದಲ್ಲಿ ಅಮೂಲಾಗ್ರ ಬದಲಾವಣೆ ಮಾಡಿ, ಅ – ಅಗಸ, ಈ – ಈಶ, A – Apple, D – Dog ಎಂಬ ಕ್ರಮವನ್ನು ಕೇವಲ Supplement ಆಗಿ ಕಲಿಸಿ ಮುಖ್ಯ ಶಿಕ್ಷಣ ಇಲ್ಲಿನ ಬದುಕಿನ ಅವಶ್ಯಕತೆ, ಕ್ರಿಯಾತ್ಮಕತೆ, ಸಹಜತೆ ಮತ್ತು ಜೀವಪರ ನಿಲುವಿನ ಕ್ರಮವನ್ನು ರೂಪಿಸಬೇಕು,

SSLC ನಂತರದ ಒಂದು ವರ್ಷದ ಶಿಕ್ಷಣವನ್ನು ಕಡ್ಡಾಯವಾಗಿ ದೈಹಿಕ ಮತ್ತು ಮಾನಸಿಕ ತರಬೇತಿಯ ಕ್ರಮವಾಗಿ ( Military training ) ರೂಪಿಸಬೇಕು,

ಶಿಕ್ಷಣದ ಗುಣಮಟ್ಟವನ್ನು ಅತ್ಯಂತ ಮೇಲ್ದರ್ಜೆಗೆ ಏರಿಸಿ ಅದರ ಖರ್ಚನ್ನು ಕಡಿಮೆಗೊಳಿಸಿ, ಕೃಷಿ ಮತ್ತು ಅದಕ್ಕೆ ಪೂರಕ ಉದ್ಯೋಗ ಸೃಷ್ಟಿಸಿ, ಭಾರತ ಹೊರತುಪಡಿಸಿ ಇಡೀ ವಿಶ್ವದ ಆಹಾರದ ಅವಶ್ಯಕತೆ ಗಮನಿಸಿ ಆ ವಸ್ತುಗಳನ್ನು ರಪ್ತು ಮಾಡಲು ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು,

ನಿರುದ್ಯೋಗಿಗಳಿಗೆ ಕೆಲಸ ಸಿಗುವವರೆಗೂ ಒಂದಷ್ಟು ತೃಪ್ತಿದಾಯಕ ಭತ್ಯೆ ನೀಡಿ, ಹೆಚ್ಚು ಹೆಚ್ಚು ಉದ್ಯೋಗ ಕಲ್ಪಿಸಬೇಕು,

ಜಾತಿಯನ್ನೇ ನಾಶ ಮಾಡಿದರೆ ಜಾತಿಯ ಮೀಸಲಾತಿ ಪ್ರಶ್ನೆಯೇ ಉದ್ಭವಾಗುವುದಿಲ್ಲ,
ಪರೋಕ್ಷವಾಗಿ ಭ್ರಷ್ಟಾಚಾರವೂ ಸ್ವಲ್ಪ ಕಡಿಮೆಯಾಗುತ್ತದೆ,

ಹೀಗೆ ಹಲವಾರು ವಿಚಾರಗಳು ಮನದಲ್ಲಿ ಮೂಡುತ್ತದೆ. ಇದೂ ಪರಿಪೂರ್ಣವೇನು ಅಲ್ಲ. ವಾಸ್ತವವಾಗಿ ಕಾರ್ಯರೂಪಕ್ಕೆ ಬರುವಾಗ ಪ್ರಾಯೋಗಿಕ ಸಮಸ್ಯೆಗಳನ್ನು ಅರ್ಥ ಮಾಡಿಕೊಂಡು ಒಂದಷ್ಟು ಬದಲಾವಣೆಗಳೂ ಅವಶ್ಯ,

ಇದು ಈಗಿನ ಜನರ ಮನೋಭಾವದಲ್ಲಿ‌ ಕಷ್ಟ ಎನಿಸಿದರೂ ಒಳ್ಳೆಯ ವಾತಾವರಣ ಮತ್ತು ನಂಬಿಕೆ ಸೃಷ್ಟಿಯಾದರೆ ಸಾಧ್ಯವಾಗಲೂ ಬಹುದು.

ಸಾಮಾಜಿಕ ನ್ಯಾಯವನ್ನು ಗಮನದಲ್ಲಿಟ್ಟುಕೊಂಡು,
ಹಾಗಾಗಲಿ ಎಂದು ಆಶಿಸುತ್ತಾ……

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 minutes ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

1 hour ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

3 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

9 hours ago

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

11 hours ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

11 hours ago