ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗನುಸಾರವಾಗಿ ವಿನಮ್ರತೆಯಿಂದ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವನಿಗೆ ಸಕಾರಾತ್ಮಕ ಧೋರಣೆ ಎಂಬುದೇ ಸ್ವ ಉದ್ಯೋಗಕ್ಕೆ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿಯಾದ ಸಾಧನಾ ಪೋಟೆ ಅವರು ತಿಳಿಸಿದರು.
ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ಫೋನ್ ರಿಪೇರಿ ಮತ್ತು ಸೇವೆ ಹಾಗೂ ಬ್ಯೂಟಿ ಪಾರ್ಲರ್ ಮ್ಯಾನೆಜ್ಮೆಂಟ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ, ಅವರು ಮಾತನಾಡಿದರು.
ಸಮಾಜದಲ್ಲಿನ ಜನರು ಏನೆಂದಾರೂ ಎಂಬ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಸ್ವ ಉದ್ಯೋಗ ಕೈಗೊಳ್ಳುವಂತೆ ತಿಳಿಸಿದರಲ್ಲದೆ, ವೃತ್ತಿಗೌರವ ಮುಖ್ಯವೇ ಹೊರತು, ಸಾಮಾಜಿಕ ಸ್ಥಾನಮಾನವಲ್ಲ ಎಂದು ತಿಳಿಸಿದರು.
ನೈಜವಾದ ಸ್ವಾಭಿಮಾನದ ಜ್ಞಾನ ದೊರೆಯುವುದು ಸ್ವ ಉದ್ಯೋಗದಲ್ಲಿ ಎಂದರೆ ತಪ್ಪಾಗಲಾರದು ಎಂದ ಅವರು, ಬಹಳಷ್ಟು ವ್ಯಕ್ತಿತ್ವದ ಮೌಲ್ಯಗಳ ಬೇಡಿಕೆಯನ್ನು ಸಹ ಸ್ವಯಂ ಉದ್ಯೋಗ ಎಂಬುದು ಪರಿಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯಲ್ಲಿ ಪಡೆದ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಕೆಲಸದ ಗುಣಮಟ್ಟದ ಕುರಿತು ಕಾಳಜಿವಹಿಸುವ ಮೂಲಕ ಕಾರ್ಯನಿರ್ವಹಿಸಲು ಸಲಹೆ ನೀಡಿದರಲ್ಲದೆ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ರವೀಂದ್ರ, ಉಪನ್ಯಾಸಕಿ ವಿದ್ಯಾ ಹೊಸಮನಿ, ಮೌಲ್ಯಮಾಪಕರಾದ ಗಂಗಾಧರಮೂರ್ತಿ, ಕೃಷ್ಣಪೇಟೆ, ಅಪರ್ಣಾ ವಾಲಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ (ಡಿಪಿಎ) ಅಧ್ಯಕ್ಷರಾಗಿರುವ ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರು ಶಿಷ್ಟಾಚಾರದ ಹೆಸರಿನಲ್ಲಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅನಗತ್ಯವಾಗಿ…
ದೊಡ್ಡಬಳ್ಳಾಪುರ: ರೈತರಿಂದ ಖರೀದಿಸುವ ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ 10 ಹೆಚ್ಚಿಸುವಂತೆ ಒತ್ತಾಯಿಸಿ ಬೆಂಗಳೂರು ಹಾಲು ಒಕ್ಕೂಟ (ಬಮೂಲ್)…
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…