ಸಕಾರಾತ್ಮಕ ಧೋರಣೆ ಎಂಬುದು ಸ್ವ ಉದ್ಯೋಗಕ್ಕೆ ಅಡಿಪಾಯ- ರಾಜ್ಯ ಜಂಟಿ ನಿರ್ದೇಶಕಿ ಸಾಧನಾ ಪೋಟೆ

ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗನುಸಾರವಾಗಿ ವಿನಮ್ರತೆಯಿಂದ‌ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವನಿಗೆ ಸಕಾರಾತ್ಮಕ ಧೋರಣೆ ಎಂಬುದೇ ಸ್ವ ಉದ್ಯೋಗಕ್ಕೆ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿಯಾದ ಸಾಧನಾ ಪೋಟೆ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ಫೋನ್ ರಿಪೇರಿ ಮತ್ತು ಸೇವೆ ಹಾಗೂ ಬ್ಯೂಟಿ‌ ಪಾರ್ಲರ್ ಮ್ಯಾನೆಜ್‌ಮೆಂಟ್‌‌ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ, ಅವರು ಮಾತನಾಡಿದರು.

ಸಮಾಜದಲ್ಲಿನ ಜನರು ಏನೆಂದಾರೂ ಎಂಬ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಸ್ವ ಉದ್ಯೋಗ ಕೈಗೊಳ್ಳುವಂತೆ ತಿಳಿಸಿದರಲ್ಲದೆ, ವೃತ್ತಿಗೌರವ ಮುಖ್ಯವೇ ಹೊರತು, ಸಾಮಾಜಿಕ ಸ್ಥಾನಮಾನವಲ್ಲ ಎಂದು ತಿಳಿಸಿದರು.

ನೈಜವಾದ ಸ್ವಾಭಿಮಾನದ ಜ್ಞಾನ ದೊರೆಯುವುದು ಸ್ವ ಉದ್ಯೋಗದಲ್ಲಿ ಎಂದರೆ ತಪ್ಪಾಗಲಾರದು ಎಂದ ಅವರು, ಬಹಳಷ್ಟು ವ್ಯಕ್ತಿತ್ವದ ಮೌಲ್ಯಗಳ ಬೇಡಿಕೆಯನ್ನು ಸಹ ಸ್ವಯಂ ಉದ್ಯೋಗ ಎಂಬುದು ಪರಿಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯಲ್ಲಿ ಪಡೆದ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಕೆಲಸದ ಗುಣಮಟ್ಟದ ಕುರಿತು ಕಾಳಜಿವಹಿಸುವ ಮೂಲಕ ಕಾರ್ಯನಿರ್ವಹಿಸಲು ಸಲಹೆ ನೀಡಿದರಲ್ಲದೆ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ರವೀಂದ್ರ, ಉಪನ್ಯಾಸಕಿ ವಿದ್ಯಾ ಹೊಸಮನಿ, ಮೌಲ್ಯಮಾಪಕರಾದ ಗಂಗಾಧರಮೂರ್ತಿ, ಕೃಷ್ಣಪೇಟೆ, ಅಪರ್ಣಾ ವಾಲಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

9 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

10 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

19 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

3 days ago