ಸಕಾರಾತ್ಮಕ ಧೋರಣೆ ಎಂಬುದು ಸ್ವ ಉದ್ಯೋಗಕ್ಕೆ ಅಡಿಪಾಯ- ರಾಜ್ಯ ಜಂಟಿ ನಿರ್ದೇಶಕಿ ಸಾಧನಾ ಪೋಟೆ

ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗನುಸಾರವಾಗಿ ವಿನಮ್ರತೆಯಿಂದ‌ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವನಿಗೆ ಸಕಾರಾತ್ಮಕ ಧೋರಣೆ ಎಂಬುದೇ ಸ್ವ ಉದ್ಯೋಗಕ್ಕೆ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿಯಾದ ಸಾಧನಾ ಪೋಟೆ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ಫೋನ್ ರಿಪೇರಿ ಮತ್ತು ಸೇವೆ ಹಾಗೂ ಬ್ಯೂಟಿ‌ ಪಾರ್ಲರ್ ಮ್ಯಾನೆಜ್‌ಮೆಂಟ್‌‌ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ, ಅವರು ಮಾತನಾಡಿದರು.

ಸಮಾಜದಲ್ಲಿನ ಜನರು ಏನೆಂದಾರೂ ಎಂಬ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಸ್ವ ಉದ್ಯೋಗ ಕೈಗೊಳ್ಳುವಂತೆ ತಿಳಿಸಿದರಲ್ಲದೆ, ವೃತ್ತಿಗೌರವ ಮುಖ್ಯವೇ ಹೊರತು, ಸಾಮಾಜಿಕ ಸ್ಥಾನಮಾನವಲ್ಲ ಎಂದು ತಿಳಿಸಿದರು.

ನೈಜವಾದ ಸ್ವಾಭಿಮಾನದ ಜ್ಞಾನ ದೊರೆಯುವುದು ಸ್ವ ಉದ್ಯೋಗದಲ್ಲಿ ಎಂದರೆ ತಪ್ಪಾಗಲಾರದು ಎಂದ ಅವರು, ಬಹಳಷ್ಟು ವ್ಯಕ್ತಿತ್ವದ ಮೌಲ್ಯಗಳ ಬೇಡಿಕೆಯನ್ನು ಸಹ ಸ್ವಯಂ ಉದ್ಯೋಗ ಎಂಬುದು ಪರಿಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯಲ್ಲಿ ಪಡೆದ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಕೆಲಸದ ಗುಣಮಟ್ಟದ ಕುರಿತು ಕಾಳಜಿವಹಿಸುವ ಮೂಲಕ ಕಾರ್ಯನಿರ್ವಹಿಸಲು ಸಲಹೆ ನೀಡಿದರಲ್ಲದೆ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ರವೀಂದ್ರ, ಉಪನ್ಯಾಸಕಿ ವಿದ್ಯಾ ಹೊಸಮನಿ, ಮೌಲ್ಯಮಾಪಕರಾದ ಗಂಗಾಧರಮೂರ್ತಿ, ಕೃಷ್ಣಪೇಟೆ, ಅಪರ್ಣಾ ವಾಲಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

7 hours ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

1 day ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

2 days ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

2 days ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

2 days ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago