ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗನುಸಾರವಾಗಿ ವಿನಮ್ರತೆಯಿಂದ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವನಿಗೆ ಸಕಾರಾತ್ಮಕ ಧೋರಣೆ ಎಂಬುದೇ ಸ್ವ ಉದ್ಯೋಗಕ್ಕೆ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿಯಾದ ಸಾಧನಾ ಪೋಟೆ ಅವರು ತಿಳಿಸಿದರು.
ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ಫೋನ್ ರಿಪೇರಿ ಮತ್ತು ಸೇವೆ ಹಾಗೂ ಬ್ಯೂಟಿ ಪಾರ್ಲರ್ ಮ್ಯಾನೆಜ್ಮೆಂಟ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ, ಅವರು ಮಾತನಾಡಿದರು.
ಸಮಾಜದಲ್ಲಿನ ಜನರು ಏನೆಂದಾರೂ ಎಂಬ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಸ್ವ ಉದ್ಯೋಗ ಕೈಗೊಳ್ಳುವಂತೆ ತಿಳಿಸಿದರಲ್ಲದೆ, ವೃತ್ತಿಗೌರವ ಮುಖ್ಯವೇ ಹೊರತು, ಸಾಮಾಜಿಕ ಸ್ಥಾನಮಾನವಲ್ಲ ಎಂದು ತಿಳಿಸಿದರು.
ನೈಜವಾದ ಸ್ವಾಭಿಮಾನದ ಜ್ಞಾನ ದೊರೆಯುವುದು ಸ್ವ ಉದ್ಯೋಗದಲ್ಲಿ ಎಂದರೆ ತಪ್ಪಾಗಲಾರದು ಎಂದ ಅವರು, ಬಹಳಷ್ಟು ವ್ಯಕ್ತಿತ್ವದ ಮೌಲ್ಯಗಳ ಬೇಡಿಕೆಯನ್ನು ಸಹ ಸ್ವಯಂ ಉದ್ಯೋಗ ಎಂಬುದು ಪರಿಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
ರುಡ್ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯಲ್ಲಿ ಪಡೆದ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಕೆಲಸದ ಗುಣಮಟ್ಟದ ಕುರಿತು ಕಾಳಜಿವಹಿಸುವ ಮೂಲಕ ಕಾರ್ಯನಿರ್ವಹಿಸಲು ಸಲಹೆ ನೀಡಿದರಲ್ಲದೆ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ರವೀಂದ್ರ, ಉಪನ್ಯಾಸಕಿ ವಿದ್ಯಾ ಹೊಸಮನಿ, ಮೌಲ್ಯಮಾಪಕರಾದ ಗಂಗಾಧರಮೂರ್ತಿ, ಕೃಷ್ಣಪೇಟೆ, ಅಪರ್ಣಾ ವಾಲಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…