ಸಕಾರಾತ್ಮಕ ಧೋರಣೆ ಎಂಬುದು ಸ್ವ ಉದ್ಯೋಗಕ್ಕೆ ಅಡಿಪಾಯ- ರಾಜ್ಯ ಜಂಟಿ ನಿರ್ದೇಶಕಿ ಸಾಧನಾ ಪೋಟೆ

ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗನುಸಾರವಾಗಿ ವಿನಮ್ರತೆಯಿಂದ‌ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವನಿಗೆ ಸಕಾರಾತ್ಮಕ ಧೋರಣೆ ಎಂಬುದೇ ಸ್ವ ಉದ್ಯೋಗಕ್ಕೆ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿಯಾದ ಸಾಧನಾ ಪೋಟೆ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ಫೋನ್ ರಿಪೇರಿ ಮತ್ತು ಸೇವೆ ಹಾಗೂ ಬ್ಯೂಟಿ‌ ಪಾರ್ಲರ್ ಮ್ಯಾನೆಜ್‌ಮೆಂಟ್‌‌ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ, ಅವರು ಮಾತನಾಡಿದರು.

ಸಮಾಜದಲ್ಲಿನ ಜನರು ಏನೆಂದಾರೂ ಎಂಬ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಸ್ವ ಉದ್ಯೋಗ ಕೈಗೊಳ್ಳುವಂತೆ ತಿಳಿಸಿದರಲ್ಲದೆ, ವೃತ್ತಿಗೌರವ ಮುಖ್ಯವೇ ಹೊರತು, ಸಾಮಾಜಿಕ ಸ್ಥಾನಮಾನವಲ್ಲ ಎಂದು ತಿಳಿಸಿದರು.

ನೈಜವಾದ ಸ್ವಾಭಿಮಾನದ ಜ್ಞಾನ ದೊರೆಯುವುದು ಸ್ವ ಉದ್ಯೋಗದಲ್ಲಿ ಎಂದರೆ ತಪ್ಪಾಗಲಾರದು ಎಂದ ಅವರು, ಬಹಳಷ್ಟು ವ್ಯಕ್ತಿತ್ವದ ಮೌಲ್ಯಗಳ ಬೇಡಿಕೆಯನ್ನು ಸಹ ಸ್ವಯಂ ಉದ್ಯೋಗ ಎಂಬುದು ಪರಿಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯಲ್ಲಿ ಪಡೆದ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಕೆಲಸದ ಗುಣಮಟ್ಟದ ಕುರಿತು ಕಾಳಜಿವಹಿಸುವ ಮೂಲಕ ಕಾರ್ಯನಿರ್ವಹಿಸಲು ಸಲಹೆ ನೀಡಿದರಲ್ಲದೆ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ರವೀಂದ್ರ, ಉಪನ್ಯಾಸಕಿ ವಿದ್ಯಾ ಹೊಸಮನಿ, ಮೌಲ್ಯಮಾಪಕರಾದ ಗಂಗಾಧರಮೂರ್ತಿ, ಕೃಷ್ಣಪೇಟೆ, ಅಪರ್ಣಾ ವಾಲಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಕಾಕ್ರೋಚ್ ಜನತಾ ಪಾರ್ಟಿ……

ಕಾಕ್ರೋಚ್ ಜನತಾ ಪಾರ್ಟಿ...... ಸಾಮಾಜಿಕ ಜಾಲತಾಣದ ಹೊಸ ರಾಜಕೀಯ ಚಳುವಳಿ ಎಂದು ಕಳೆದ ಐದಾರು ವಾರಗಳಿಂದ ಇಡೀ ದೇಶದಾದ್ಯಂತ ಬಹುದೊಡ್ಡ…

19 minutes ago

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

19 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

22 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

2 days ago