ಸಕಾರಾತ್ಮಕ ಧೋರಣೆ ಎಂಬುದು ಸ್ವ ಉದ್ಯೋಗಕ್ಕೆ ಅಡಿಪಾಯ- ರಾಜ್ಯ ಜಂಟಿ ನಿರ್ದೇಶಕಿ ಸಾಧನಾ ಪೋಟೆ

ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗನುಸಾರವಾಗಿ ವಿನಮ್ರತೆಯಿಂದ‌ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವನಿಗೆ ಸಕಾರಾತ್ಮಕ ಧೋರಣೆ ಎಂಬುದೇ ಸ್ವ ಉದ್ಯೋಗಕ್ಕೆ ಅಡಿಪಾಯವೆಂದು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಉದ್ಯೋಗ ವಿಭಾಗದ ರಾಜ್ಯ ಜಂಟಿ ನಿರ್ದೇಶಕಿಯಾದ ಸಾಧನಾ ಪೋಟೆ ಅವರು ತಿಳಿಸಿದರು.

ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆದ ಮೊಬೈಲ್ ಫೋನ್ ರಿಪೇರಿ ಮತ್ತು ಸೇವೆ ಹಾಗೂ ಬ್ಯೂಟಿ‌ ಪಾರ್ಲರ್ ಮ್ಯಾನೆಜ್‌ಮೆಂಟ್‌‌ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಶಿಬಿರಾರ್ಥಿಗಳನ್ನು ಉದ್ದೇಶಿಸಿ, ಅವರು ಮಾತನಾಡಿದರು.

ಸಮಾಜದಲ್ಲಿನ ಜನರು ಏನೆಂದಾರೂ ಎಂಬ ಕೀಳರಿಮೆ ಬಿಟ್ಟು ಆತ್ಮವಿಶ್ವಾಸದಿಂದ ಸ್ವ ಉದ್ಯೋಗ ಕೈಗೊಳ್ಳುವಂತೆ ತಿಳಿಸಿದರಲ್ಲದೆ, ವೃತ್ತಿಗೌರವ ಮುಖ್ಯವೇ ಹೊರತು, ಸಾಮಾಜಿಕ ಸ್ಥಾನಮಾನವಲ್ಲ ಎಂದು ತಿಳಿಸಿದರು.

ನೈಜವಾದ ಸ್ವಾಭಿಮಾನದ ಜ್ಞಾನ ದೊರೆಯುವುದು ಸ್ವ ಉದ್ಯೋಗದಲ್ಲಿ ಎಂದರೆ ತಪ್ಪಾಗಲಾರದು ಎಂದ ಅವರು, ಬಹಳಷ್ಟು ವ್ಯಕ್ತಿತ್ವದ ಮೌಲ್ಯಗಳ ಬೇಡಿಕೆಯನ್ನು ಸಹ ಸ್ವಯಂ ಉದ್ಯೋಗ ಎಂಬುದು ಪರಿಗಣನೆಗೆ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ರುಡ್‌ಸೆಟ್ ಸಂಸ್ಥೆಯ ನಿರ್ದೇಶಕರಾದ ರವಿಕುಮಾರ ಅವರು ಮಾತನಾಡಿ, ಸಂಸ್ಥೆಯಲ್ಲಿ ಪಡೆದ ಕೌಶಲ್ಯವನ್ನು ಅಭಿವೃದ್ಧಿಪಡಿಸಿಕೊಂಡು ಕೆಲಸದ ಗುಣಮಟ್ಟದ ಕುರಿತು ಕಾಳಜಿವಹಿಸುವ ಮೂಲಕ ಕಾರ್ಯನಿರ್ವಹಿಸಲು ಸಲಹೆ ನೀಡಿದರಲ್ಲದೆ, ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕ ರವೀಂದ್ರ, ಉಪನ್ಯಾಸಕಿ ವಿದ್ಯಾ ಹೊಸಮನಿ, ಮೌಲ್ಯಮಾಪಕರಾದ ಗಂಗಾಧರಮೂರ್ತಿ, ಕೃಷ್ಣಪೇಟೆ, ಅಪರ್ಣಾ ವಾಲಿ ಹಾಗೂ ಸಂಸ್ಥೆಯ ಸಿಬ್ಬಂದಿಗಳು ಸೇರಿದಂತೆ ಶಿಬಿರಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

4 hours ago

ನೇಪಾಳ ದುರಂತ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ

ನೇಪಾಳದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ಹಾಗೂ ದಿಢೀರ್ ಪ್ರವಾಹ (ಫ್ಲ್ಯಾಶ್ ಫ್ಲಡ್ಸ್) ದುರಂತಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಮೂಲದ ಪ್ರವಾಸಿಗರು ಅಥವಾ…

8 hours ago

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

1 day ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

4 days ago