Categories: ಲೇಖನ

ಸಕಾರಾತ್ಮಕ ಮತ್ತು ನಕಾರಾತ್ಮಕ…….

ಸಕಾರಾತ್ಮಕ – ಪಾಸಿಟಿವ್ ವಿಷಯಗಳ ಬಗ್ಗೆಯೇ ಹೆಚ್ಚು ಮಾತನಾಡಬೇಕು, ಓದಬೇಕು, ಬರೆಯಬೇಕು, ತಿಳಿಯಬೇಕು, ತಿಳಿಸಬೇಕು ಎಂಬುದು ಒಂದು ಸಾಮಾನ್ಯ ಸಾರ್ವಜನಿಕ ಅಭಿಪ್ರಾಯ…..

ಹಾಗಾದರೆ ಸಾಮಾಜಿಕ, ಧಾರ್ಮಿಕ, ರಾಜಕೀಯ, ಸಾಮಾಜಿಕ ಮುಂತಾದ ವಿಷಯಗಳಲ್ಲಿ ಯಾವುದು ಪಾಸಿಟಿವ್, ಯಾವುದು ನೆಗೆಟಿವ್ ಎಂಬುದು ಒಂದು ಪ್ರಶ್ನೆಯಾಗಿ ಕಾಡುತ್ತದೆ.

ಹಿಂದು, ಮುಸ್ಲಿಂ, ಕ್ರಿಶ್ಚಿಯನ್ ಇತ್ಯಾದಿ ಧರ್ಮಗಳ ಲೋಪ ದೋಷಗಳ ಬಗ್ಗೆ ಮಾತನಾಡುವುದು ಅಥವಾ ಅವುಗಳಲ್ಲಿರುವ ಒಳ್ಳೆಯ ಗುಣಗಳ ಬಗ್ಗೆ ಮಾತನಾಡುವುದರಲ್ಲಿ ಯಾವುದು ಪಾಸಿಟಿವ್ ಯಾವುದು ನೆಗೆಟಿವ್ ?

ಕೇವಲ ಒಳ್ಳೆಯ ವಿಷಯ ಮಾತ್ರ ಪ್ರಸ್ತಾಪಿಸಿದರೆ ನಮ್ಮ ಚಿಂತನೆಯಲ್ಲಿ ಮೂಡುವ ಲೋಪಗಳನ್ನು ಸರಿಪಡಿಸುವುದು ಹೇಗೆ ? ಕಾಲಕ್ಕೆ ತಕ್ಕಂತೆ ಲೋಪ ಸರಿಪಡಿಸದೆ ಪರಿಪೂರ್ಣ ಧರ್ಮ ಎಂದು ಕರೆಯುವುದು ಮತ್ತು ಅನುಸರಿಸುವುದು ಹೇಗೆ ?

ಪೆಹಲ್ಗಾಮ್, ಭಯೋತ್ಪಾದನೆ, ಯುದ್ಧ, ಮತಾಂತರ, ಟಿಪ್ಪು ಸುಲ್ತಾನ್, ಶಿವಾಜಿ, ಗಾಂಧಿ, ಸಾರ್ವಕರ್ ಮುಂತಾದವರ ಬಗ್ಗೆ ಪರ ಅಥವಾ ವಿರೋಧ ಮಾತನಾಡುವುದು ಅಥವಾ ಊಟ, ಬಟ್ಟೆ, ವಸತಿ, ಶಿಕ್ಷಣ, ಆರೋಗ್ಯ, ಉದ್ಯೋಗ ಇವುಗಳ ಬಗ್ಗೆ ಮಾತನಾಡುವುದು
ಇದರಲ್ಲಿ ಯಾವುದು ಪಾಸಿಟಿವ್ ಯಾವುದು ನೆಗೆಟಿವ್ ?

ಇತಿಹಾಸ ತಿರುಚಲಾಗಿದೆ, ಈಗ ಅದನ್ನು ಮತ್ತೆ ಸರಿಪಡಿಸಬೇಕು ಎಂಬುದು ಅಥವಾ ಇತಿಹಾಸ ಸರಿಯಾಗಿದೆ ಈಗ ಅದನ್ನು ತಿರುಚಲಾಗುತ್ತಿದೆ ಎಂಬುದರಲ್ಲಿ ಯಾವುದು ಪಾಸಿಟಿವ್ ಯಾವುದು ನೆಗೆಟಿವ್….

ಅಂಬಾನಿ, ಅದಾನಿಗಳು ವಿಶ್ವದ ಶ್ರೀಮಂತರ ಪಟ್ಟಿಯಲ್ಲಿ ಅತ್ಯುತ್ತಮ ಸ್ಥಾನ ಪಡೆದಿದ್ದಾರೆ, ಕೆಲವು ಸಿನಿಮಾಗಳು 1000 ಕೋಟಿಗೂ ಹೆಚ್ಚು ಲಾಭಗಳಿಸಿದ ಸಾಧನೆ ಬಗ್ಗೆ ಮಾತನಾಡುವುದು ಅಥವಾ ಈಗಲೂ ಲಕ್ಷಾಂತರ ಭಿಕ್ಷುಕರು, ಅಪೌಷ್ಟಿಕತೆಯ ಮಕ್ಕಳು, ಅತ್ಯಾಚಾರ, ಕೊಲೆಗಳು, ಭ್ರಷ್ಟಾಚಾರ, ಜಾತೀಯತೆ ಸಮಸ್ಯೆಗಳ ಬಗ್ಗೆ ಮಾತನಾಡುವುದು ಇದರಲ್ಲಿ ಯಾವುದು ಪಾಸಿಟಿವ್ ಯಾವುದು ನೆಗೆಟಿವ್ ?

ಮಾಧ್ಯಮಗಳ ಪ್ರತಿ ಕ್ಷಣವೂ ಬಿತ್ತರಿಸುವ ಬ್ರೇಕಿಂಗ್ ನ್ಯೂಸ್ ಗಳಲ್ಲಿ ಎಷ್ಟು ಪಾಸಿಟಿವ್ ಇದೆ, ಎಷ್ಟು ನೆಗೆಟಿವ್ ಇದೆ, ಅದು ಯಾವುದು ಎಂದು ಗಮನಿಸಿದರೆ ಸಕಾರಾತ್ಮಕ ಮತ್ತು ನಕಾರಾತ್ಮಕದ ಅರ್ಥವೇ ಬದಲಾಗುತ್ತದೆ…..

ಕುಸಿಯುತ್ತಿರುವ ರೂಪಾಯಿ ಬೆಲೆ, ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ಅಥವಾ ಆರ್ಥಿಕ ಗಾತ್ರದಲ್ಲಿ ಮತ್ತು ಜಿಡಿಪಿ ಬೆಳವಣಿಗೆಯಲ್ಲಿ ಏರುತ್ತಿರುವ ಅಂಕಿಅಂಶಗಳ ಬಗ್ಗೆ ಮಾತನಾಡುವುದರಲ್ಲಿ ಯಾವುದು ಪಾಸಿಟಿವ್ ಯಾವುದು ನೆಗೆಟಿವ್ ?

ಮುಸ್ಲಿಮರದು ಅತಿಯಾಯಿತು ಅವರಿಗೆ ಸರಿಯಾಗಿ ಪಾಠ ಕಲಿಸಬೇಕು ಎಂಬುದು ಒಂದು ಕಡೆ, ಹಿಂದೂಗಳ ದಬ್ಬಾಳಿಕೆ ಜಾಸ್ತಿಯಾಯಿತು‌ ಅವರಿಗೆ ಸರಿಯಾಗಿ ಪಾಠ ಕಲಿಸಬೇಕು ಎಂಬುದು ಅಥವಾ ಘರ್ಷಣೆ ಬೇಡ ಆಗಿದ್ದು ಆಗಿ ಹೋಯಿತು, ಈಗ ಎಲ್ಲರೂ ಒಟ್ಟಾಗಿ ಒಬ್ಬರನ್ನೊಬ್ಬರು ಗೌರವಿಸಿತ್ತಾ ಇರೋಣ ಎಂಬುದರಲ್ಲಿ ಯಾವುದು ಪಾಸಿಟಿವ್ ಯಾವುದು ನೆಗೆಟಿವ್ ?

ಹಿಂದೂ ಧರ್ಮ ತುಂಬಾ ಒಳ್ಳೆಯದು, ಇಸ್ಲಾಂ ಧರ್ಮ ತುಂಬಾ ಶಾಂತಿ ಪ್ರಿಯ ಧರ್ಮ, ಕ್ರಿಶ್ಚಿಯನ್ ಧರ್ಮ ತುಂಬಾ ಸಮಾನತೆಯ ಪ್ರೀತಿಯ ಧರ್ಮ ಎಂಬುದು ಅಥವಾ ಹಿಂದೂ ಧರ್ಮದಲ್ಲಿ ಅಮಾನವೀಯ ಜಾತಿ ಪದ್ದತಿ ಇದೆ, ಇಸ್ಲಾಂ ಧರ್ಮದಲ್ಲಿ ಪ್ರಶ್ನೆ ಮಾಡಲಾಗದ ಮತಾಂಧತೆ ಇದೆ, ಕ್ರಿಶ್ಚಿಯನ್ ಧರ್ಮದಲ್ಲಿ ಮತಾಂತರ ಇದೆ ಎಂದು ಚರ್ಚೆ ಮಾಡುವಾಗ ಯಾವುದು ಪಾಸಿಟಿವ್ ಯಾವುದು ನೆಗೆಟಿವ್‌ ?

ಸಮಸ್ಯೆಗಳ ಬಗ್ಗೆ ಮಾತನಾಡುವುದು, ಸಮಸ್ಯೆ ಇದ್ದರೂ ಅದನ್ನು ಮರೆಮಾಚಿ ಕೇವಲ ಅನುಕೂಲಗಳನ್ನು ಮಾತ್ರ ಮಾತನಾಡುವುದು, ಸಮಸ್ಯೆ ಮತ್ತು ಪರಿಹಾರ ಎರಡನ್ನೂ ಮಾತನಾಡುವುದು ಇದರಲ್ಲಿ ‌ಯಾವುದು ಪಾಸಿಟಿವ್ ಯಾವುದು ನೆಗೆಟಿವ್ ?

ಸಮಸ್ಯೆಗಳನ್ನು ಸರಿಯಾಗಿ ಅರ್ಥ ಮಾಡಿಕೊಂಡಾಗ ಮಾತ್ರ ಪರಿಹಾರ ಸಾಧ್ಯ. ‌ಪಾಸಿಟಿವ್ ಮತ್ತು ನೆಗೆಟಿವ್ ಎಂದು ನಮಗೆ ಅನುಕೂಲ ವಿಷಯಗಳನ್ನು ಮಾತ್ರ ಮಾತನಾಡುವುದಲ್ಲ. ಸಮಯಕ್ಕೆ ತಕ್ಕಂತೆ ಲಾಭ ಪಡೆಯುವುದು ಅಥವಾ ವಾದ ಮಂಡಿಸುವುದಲ್ಲ.
ಹೃದಯಾಂತರಾಳದಿಂದ ಸಮಸ್ಯೆಗಳಿಗೆ ನಿಜವಾದ ಸ್ಪಂದನೆ ಇರಬೇಕು. ಆಗ ಸಮಾಜ ಶಾಂತಿಯ ಕಡೆಗೆ ಸಾಗುತ್ತದೆ.

ಮುಖವಾಡಗಳ ಮರೆಯಲ್ಲಿ ಏನನ್ನೂ ಸಾಧಿಸಲು ಸಾಧ್ಯವಿಲ್ಲ ತಮ್ಮ ಸ್ವ ಹಿತಾಸಕ್ತಿಯ ಹೊರತು.
ಬಡತನ ನೆಗೆಟಿವ್, ಶ್ರೀಮಂತಿಕೆ ಪಾಸಿಟಿವ್, ಬಡವರು ಪಾಸಿಟಿವ್, ಶ್ರೀಮಂತರು ನೆಗೆಟಿವ್ ಹೀಗೂ ಚರ್ಚೆ ಮಾಡಬಹುದು. ಆದರೆ ವಾಸ್ತವ ಬೇರೆ. ಅದು ವಿಶಾಲ ಶುದ್ಧ ಮನಸ್ಸುಗಳ ಗ್ರಹಿಕೆಗೆ ಮಾತ್ರ ನಿಲುಕುತ್ತದೆ. ಮುಖವಾಡ ಧರಿಸಿದವರಿಗಲ್ಲ…..

ವೈಯಕ್ತಿಕ ಮಟ್ಟದಲ್ಲಿ ಒಳ್ಳೆಯದು ಕೆಟ್ಟದ್ದನ್ನು ಪಾಸಿಟಿವ್ ಅಥವಾ ನೆಗೆಟಿವ್ ಎಂದು ಅನುಕೂಲಕರವಾಗಿ ವಿಂಗಡಿಸಬಹುದು. ಆದರೆ ಒಟ್ಟಾರೆ ವ್ಯವಸ್ಥೆಯನ್ನು ವಿಮರ್ಶಿಸುವಾಗ ಇದು ತುಂಬಾ ಕಷ್ಟ. ವಿಷಯಗಳನ್ನು ಆಧರಿಸಿ ಅರ್ಥೈಸಬೇಕಾಗುತ್ತದೆ.
ಧನ್ಯವಾದಗಳು

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

51 minutes ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

2 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

15 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

19 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

1 day ago