‘ಇಂದು ನಾಳೆ ಇನ್ನಿಲ್ಲ , ಹೇಳಿದ ಸಮಯ ತಪ್ಪಲ್ಲ’ ಎಂಬ ಧ್ಯೇಯವಾಕ್ಯದೊಂದಿಗೆ ಸರ್ಕಾರದ ವಿವಿಧ ಯೋಜನೆಗಳು, ದಾಖಲೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರೈಸುವ ಸಕಾಲ ಮಿಷನ್ ಅನುಷ್ಠಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು 2023 ರ ಡಿಸೆಂಬರ್ ತಿಂಗಳಲ್ಲಿ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದೆ.
ಜಿಲ್ಲಾಡಳಿತದ ಈ ಸ್ಪಂದನಶೀಲತೆ ಹಾಗೂ ಸಾಧನೆಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕಳೆದ ಡಿಸೆಂಬರ್ ತಿಂಗಳಲ್ಲಿ 64,099 ಅರ್ಜಿಗಳು ಸಕಾಲ ಅಡಿ ಸ್ವೀಕೃತಿಯಾಗಿದ್ದವು. 65,820 ಅರ್ಜಿಗಳು ವಿಲೇವಾರಿಯಾಗಿವೆ. 3218 ಅರ್ಜಿಗಳು ತಿರಸ್ಕೃತಗೊಂಡಿವೆ. 859 ಅರ್ಜಿಗಳು ಮಾತ್ರ ಬಾಕಿ ಇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯು, ಶೇ.18.5 ಅಂಕಗಳನ್ನು(ವೇಟೇಜ್) ಪಡೆದು ಈ ಸಾಧನೆ ಮಾಡಿದೆ. ಇದಕ್ಕಾಗಿ ಶ್ರಮಿಸುತ್ತಿರುವ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಪಂ ಸಿಇಓ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಪಂ ಉಪಕಾರ್ಯದರ್ಶಿ ರಮೇಶ್ ಟಿ.ಕೆ ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಈ ಪ್ರಯತ್ನವನ್ನು ಸಚಿವರು ಶ್ಲಾಘಿಸಿದ್ದಾರೆ.
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…