ಸಕಾಲ ಸೇವೆ ಅನುಷ್ಠಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ ರಾಜ್ಯಕ್ಕೆ ಪ್ರಥಮ

‘ಇಂದು ನಾಳೆ ಇನ್ನಿಲ್ಲ , ಹೇಳಿದ ಸಮಯ ತಪ್ಪಲ್ಲ’ ಎಂಬ ಧ್ಯೇಯವಾಕ್ಯದೊಂದಿಗೆ ಸರ್ಕಾರದ ವಿವಿಧ ಯೋಜನೆಗಳು, ದಾಖಲೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರೈಸುವ ಸಕಾಲ ಮಿಷನ್ ಅನುಷ್ಠಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು 2023 ರ ಡಿಸೆಂಬರ್ ತಿಂಗಳಲ್ಲಿ ರಾಜ್ಯಕ್ಕೆ ಮೊದಲ ಸ್ಥಾನದಲ್ಲಿದೆ.

ಜಿಲ್ಲಾಡಳಿತದ ಈ ಸ್ಪಂದನಶೀಲತೆ ಹಾಗೂ ಸಾಧನೆಗೆ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಕಳೆದ ಡಿಸೆಂಬರ್ ತಿಂಗಳಲ್ಲಿ 64,099 ಅರ್ಜಿಗಳು ಸಕಾಲ ಅಡಿ ಸ್ವೀಕೃತಿಯಾಗಿದ್ದವು. 65,820 ಅರ್ಜಿಗಳು ವಿಲೇವಾರಿಯಾಗಿವೆ. 3218 ಅರ್ಜಿಗಳು ತಿರಸ್ಕೃತಗೊಂಡಿವೆ. 859 ಅರ್ಜಿಗಳು ಮಾತ್ರ ಬಾಕಿ ಇವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯು, ಶೇ.18.5 ಅಂಕಗಳನ್ನು(ವೇಟೇಜ್) ಪಡೆದು ಈ ಸಾಧನೆ ಮಾಡಿದೆ. ಇದಕ್ಕಾಗಿ ಶ್ರಮಿಸುತ್ತಿರುವ ಜಿಲ್ಲಾಧಿಕಾರಿ ಡಾ.ಶಿವಶಂಕರ.ಎನ್, ಜಿಪಂ ಸಿಇಓ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಪಂ ಉಪಕಾರ್ಯದರ್ಶಿ ರಮೇಶ್ ಟಿ.ಕೆ ಸೇರಿದಂತೆ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದ ಈ ಪ್ರಯತ್ನವನ್ನು ಸಚಿವರು ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

3 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

14 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

15 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago