ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಹನುಮಂತಯ್ಯ.ಟಿ , ಉಪಾಧ್ಯಕ್ಷರಾಗಿ ಪದ್ಮಶ್ರೀ ಬೈರಯ್ಯ ಅವಿರೋಧ ಆಯ್ಕೆ: ಗಣ್ಯರಿಂದ ಅಭಿನಂದನೆ

ಸಕ್ಕರೆಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ  ಹನುಮಂತಯ್ಯ.ಟಿ, ಉಪಾಧ್ಯಕ್ಷರಾಗಿ ಪದ್ಮಶ್ರೀ ಬೈರಯ್ಯ ಅವರು ಅವಿರೋಧವಾಗಿ ಇಂದು ಆಯ್ಕೆಯಾಗಿದ್ದಾರೆ.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಗಣ್ಯರು ಹೂಮಾಲೆ ಹಾಕಿ, ಸಿಹಿ ಹಂಚಿಕೊಂಡು, ಪಟಾಕಿ ಸಿಡಿಸಿ ಅಭಿನಂದಿಸಿದರು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಅಧಿಕಾರವಧಿ ಒಂದು ವರ್ಷ ಇರುತ್ತದೆ. ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 18 ಸದಸ್ಯರು ಇದ್ದಾರೆ.

ನೂತನ ಅಧ್ಯಕ್ಷ ಹನುಮಂತಯ್ಯ.ಟಿ ಮಾತನಾಡಿ, ಪಕ್ಷಾತೀತವಾಗಿ ಎಲ್ಲಾ ಸದಸ್ಯರನ್ನು ಒಗ್ಗೂಡಿಸಿಕೊಂಡು ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಅಭಿವೃದ್ಧಿ ಮಾಡಲು ಹಗಲಿರುಳು ದುಡಿಯುತ್ತೇನೆ ಎಂದು ಹೇಳಿದರು.

ಮೊದಲು ಆದತ್ಯೆ‌ ಮೇರೆಗೆ ಅಭಿವೃದ್ಧಿ ಕೆಲಸ ಮಾಡಲಾಗುವುದು. ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಲು ಯತ್ನಿಸುವೆ ಎಂದರು.

ನಂತರ ಉಪಾಧ್ಯಕ್ಷೆ ಪದ್ಮಶ್ರೀ ಬೈರಣ್ಣ ಮಾತನಾಡಿ, ನನ್ನನ್ನು ಉಪಾಧ್ಯಕ್ಷೆಯನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲಾ ಸದಸ್ಯರಿಗೆ ಚಿರ ಋಣಿಯಾಗಿರುತ್ತೇನೆ. ಒಗ್ಗಟ್ಟಿನಿಂದ ನಮ್ಮ ಇತಿಮಿತಿಯಲ್ಲಿ ಕೆಲಸ ಮಾಡಲು ಅವಿರತ ದುಡಿಯುತ್ತೇನೆ ಎಂದರು.

ಇದಕ್ಕೂ ಮೊದಲು ಅವಿರೋಧವಾಗಿ ಆಯ್ಕೆಯಾದ ನಂತರ ಪಂಚಾಯಿತಿಯಿಂದ ಗ್ರಾಮದ ಪ್ರಮುಖ ವೃತ್ತದವರೆಗೆ ಕಾಲ್ನಡಿಗೆ ಮೂಲಕ ಮೆರವಣಿಗೆ ಹೊರಟರು.

Ramesh Babu

Journalist

Recent Posts

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

4 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

4 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

6 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

7 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

8 hours ago

ನೂತನ ಶಾಲಾ ಕಟ್ಟಡ ಮತ್ತು ಅಂಗನವಾಡಿ ಕೇಂದ್ರ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ 4 ನೇ ವಾರ್ಡ್‌ನ ವಿನಾಯಕ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಅಸ್ಟಿಮೊ ಫೈ ಕಂಪನಿಯ…

15 hours ago