ಸಕ್ರಿಯ ರೌಡಿ ಶೀಟರ್‌ಗಳ ಮನೆಗಳ ಮೇಲೆ ಖಾಕಿ ದಾಳಿ: 45ಕ್ಕೂ ಹೆಚ್ಚು ಕಡೆ ತಪಾಸಣೆ

ದೊಡ್ಡಬಳ್ಳಾಪುರ: ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವ ಹಾಗೂ ರೌಡಿ ಶೀಟರ್‌ಗಳ ಮೇಲೆ ನಿಗಾ ಬಿಗಿಗೊಳಿಸುವ ಉದ್ದೇಶದಿಂದ ದೊಡ್ಡಬಳ್ಳಾಪುರ ಡಿವೈಎಸ್‌ಪಿ ಉಪವಿಭಾಗ ವ್ಯಾಪ್ತಿಯಲ್ಲಿ ಪೊಲೀಸರು ಭಾನುವಾರ ವಿಶೇಷ ಕಾರ್ಯಾಚರಣೆ ನಡೆಸಿ 45ಕ್ಕೂ ಹೆಚ್ಚು ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದರು.

ಡಿವೈಎಸ್‌ಪಿ ಪಾಂಡುರಂಗ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ದೊಡ್ಡಬಳ್ಳಾಪುರ ನಗರ, ಗ್ರಾಮಾಂತರ, ಹೊಸಹಳ್ಳಿ, ದೊಡ್ಡಬೆಳವಂಗಲ, ವಿಶ್ವನಾಥಪುರ, ಚೆನ್ನರಾಯಪಟ್ಟಣ ಹಾಗೂ ವಿಜಯಪುರ ಪೊಲೀಸ್ ಠಾಣೆಗಳ ಇನ್ಸ್‌ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಸಕ್ರಿಯ ರೌಡಿ ಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿ ಆಯುಧಗಳು ಹಾಗೂ ಅಪರಾಧ ಚಟುವಟಿಕೆಗಳಿಗೆ ಬಳಸುವ ವಸ್ತುಗಳಿಗಾಗಿ ಶೋಧ ನಡೆಸಲಾಯಿತು.

ತಪಾಸಣೆ ವೇಳೆ ಯಾವುದೇ ಮನೆಗಳಲ್ಲಿ ಆಯುಧಗಳು ಅಥವಾ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದ ವಸ್ತುಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಕುರಿತು ಮಾತನಾಡಿದ ಡಿವೈಎಸ್‌ಪಿ ಪಾಂಡುರಂಗ, ರೌಡಿ ಚಟುವಟಿಕೆಗಳನ್ನು ಮಟ್ಟ ಹಾಕಲು ಹಾಗೂ ಅಪರಾಧ ಹಿನ್ನೆಲೆಯುಳ್ಳವರ ಮೇಲೆ ಸದಾ ನಿಗಾ ವಹಿಸುವಂತೆ ಹಿರಿಯ ಅಧಿಕಾರಿಗಳಿಂದ ಸೂಚನೆ ಬಂದ ಹಿನ್ನೆಲೆಯಲ್ಲಿ ಈ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಉಪವಿಭಾಗದ ವಿವಿಧ ಠಾಣೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಒಳಗೊಂಡ ತಂಡ ರಚಿಸಿ ಸುಮಾರು 45 ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ ಎಂದು ಅವರು ತಿಳಿಸಿದರು.

ರೌಡಿ ಶೀಟರ್‌ಗಳ ಪ್ರಸ್ತುತ ಉದ್ಯೋಗ, ಆದಾಯದ ಮೂಲ ಸೇರಿದಂತೆ ವಿವಿಧ ಮಾಹಿತಿಗಳನ್ನು ಸಂಗ್ರಹಿಸಲಾಗಿದ್ದು, ಮುಂದಿನ ದಿನಗಳಲ್ಲಿ ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳದಂತೆ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಕಾರ್ಯಾಚರಣೆಗಳನ್ನು ಮುಂದುವರಿಸಲಾಗುವುದು ಎಂದು ಡಿವೈಎಸ್‌ಪಿ ಹೇಳಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

12 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

16 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago