ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ ಈ ಆದೇಶವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಅಧಿಸೂಚನೆಯ ಪ್ರಕಾರ, ವಿವಿಧ ಜಿಲ್ಲೆಗಳ ಆಡಳಿತಾತ್ಮಕ ಸಮನ್ವಯ, ಅಭಿವೃದ್ಧಿ ಕಾರ್ಯಕ್ರಮಗಳ ಮೇಲ್ವಿಚಾರಣೆ ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನದ ಜವಾಬ್ದಾರಿಯನ್ನು ಸಚಿವರಿಗೆ ವಹಿಸಲಾಗಿದೆ.

ಜಿಲ್ಲಾವಾರು ಜವಾಬ್ದಾರಿ ಹಂಚಿಕೆಯ ವಿವರ ಹೀಗಿದೆ:

1. ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

2. ಕೆ.ಎಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹೊಣೆಗಾರಿಕೆ ವಹಿಸಲಾಗಿದೆ.

3. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

4. ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

5. ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ ಜೊತೆಗೆ ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.

6. ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ.

7. ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

8. ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

9. ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.

10. ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ.

11. ಬೈರತಿ ಸುರೇಶ್ ಅವರಿಗೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ

12. ಯು.ಟಿ ಖಾದರ್ ಅವರಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ

13. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು, ಚಾಮರಾಜನಗರ

ರಾಜ್ಯ ಸರ್ಕಾರದ ಈ ಕ್ರಮದಿಂದ ಜಿಲ್ಲಾಮಟ್ಟದ ಆಡಳಿತ ವ್ಯವಸ್ಥೆಯಲ್ಲಿ ಮತ್ತಷ್ಟು ಸಮನ್ವಯ ಸಾಧಿಸುವುದು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡುವ ಉದ್ದೇಶ ಹೊಂದಲಾಗಿದೆ.

Ramesh Babu

Journalist

Recent Posts

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

4 hours ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

20 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

2 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

2 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

3 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

4 days ago