ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿ ಹಂಚಿಕೆ

ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ ಈ ಆದೇಶವನ್ನು ಅಧಿಕೃತವಾಗಿ ಪ್ರಕಟಿಸಲಾಗಿದೆ.

ಅಧಿಸೂಚನೆಯ ಪ್ರಕಾರ, ವಿವಿಧ ಜಿಲ್ಲೆಗಳ ಆಡಳಿತಾತ್ಮಕ ಸಮನ್ವಯ, ಅಭಿವೃದ್ಧಿ ಕಾರ್ಯಕ್ರಮಗಳ ಮೇಲ್ವಿಚಾರಣೆ ಹಾಗೂ ಸರ್ಕಾರಿ ಯೋಜನೆಗಳ ಅನುಷ್ಠಾನದ ಜವಾಬ್ದಾರಿಯನ್ನು ಸಚಿವರಿಗೆ ವಹಿಸಲಾಗಿದೆ.

ಜಿಲ್ಲಾವಾರು ಜವಾಬ್ದಾರಿ ಹಂಚಿಕೆಯ ವಿವರ ಹೀಗಿದೆ:

1. ಡಾ. ಜಿ. ಪರಮೇಶ್ವರ್ ಅವರಿಗೆ ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

2. ಕೆ.ಎಚ್. ಮುನಿಯಪ್ಪ ಅವರಿಗೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಹೊಣೆಗಾರಿಕೆ ವಹಿಸಲಾಗಿದೆ.

3. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

4. ಎಂ.ಬಿ. ಪಾಟೀಲ್ ಅವರಿಗೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

5. ಕೆ.ಜೆ. ಜಾರ್ಜ್ ಅವರಿಗೆ ಶಿವಮೊಗ್ಗ ಜೊತೆಗೆ ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.

6. ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ನಗರ ಮತ್ತು ಹಾಸನ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ.

7. ಈಶ್ವರ ಖಂಡ್ರೆ ಅವರಿಗೆ ಬೀದರ್ ಮತ್ತು ಗದಗ ಜಿಲ್ಲೆಗಳ ಜವಾಬ್ದಾರಿ ನೀಡಲಾಗಿದೆ.

8. ಸತೀಶ್ ಜಾರಕಿಹೊಳಿ ಅವರಿಗೆ ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಉಸ್ತುವಾರಿ ನೀಡಲಾಗಿದೆ.

9. ಪ್ರಿಯಾಂಕ್ ಖರ್ಗೆ ಅವರಿಗೆ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳ ಜವಾಬ್ದಾರಿ ವಹಿಸಲಾಗಿದೆ.

10. ಡಾ. ಶರಣಪ್ರಕಾಶ್ ಪಾಟೀಲ್ ಅವರಿಗೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಹೊಣೆಗಾರಿಕೆ ನೀಡಲಾಗಿದೆ.

11. ಬೈರತಿ ಸುರೇಶ್ ಅವರಿಗೆ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ

12. ಯು.ಟಿ ಖಾದರ್ ಅವರಿಗೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ

13. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮೈಸೂರು, ಚಾಮರಾಜನಗರ

ರಾಜ್ಯ ಸರ್ಕಾರದ ಈ ಕ್ರಮದಿಂದ ಜಿಲ್ಲಾಮಟ್ಟದ ಆಡಳಿತ ವ್ಯವಸ್ಥೆಯಲ್ಲಿ ಮತ್ತಷ್ಟು ಸಮನ್ವಯ ಸಾಧಿಸುವುದು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಮೇಲ್ವಿಚಾರಣೆ ಮಾಡುವ ಉದ್ದೇಶ ಹೊಂದಲಾಗಿದೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

15 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

19 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

20 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago