ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ವಿವಾದಾತ್ಮಕ ಭಾಷಣ ಮಾಡಿರುವ ಸಚಿವ ಅಶ್ವತ್ಥನಾರಾಯಣ್ ಅವರನ್ನು ಕೂಡಲೇ ಸಂಪುಟದಿಂದ ತೆಗೆದುಹಾಕಿ, ಕೊಲೆಗೆ ಪ್ರಚೋದನೆ ನೀಡಿರುವ ಪ್ರಕರಣದಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಡಿವೈಎಸ್ ಪಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಅದ್ದೆ ಮಂಜುನಾಥ, ಸ್ವಾತಂತ್ರ್ಯ ಪೂರ್ವದಲ್ಲಿ ದುಡಿಯುವ ವರ್ಗವನ್ನು ಕೀಳಾಗಿ ನೋಡಲಾಗುತ್ತಿತ್ತು. ಸಂವಿಧಾನ ಜಾರಿಯಾದ ಬಳಿಕ ಅಂತಹ ಕೀಳು ಪದ್ಧತಿ ಬದಲಾಗಿದೆ. ಆದರೆ ಮತ್ತೆ ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಳೆ ಚಾಳಿ ಮುಂದುವರೆಸಿದೆ. ಬ್ರಾಹ್ಮಣ, ಪುರೋಹಿತ ಶಾಹಿ ಪದ್ಧತಿಯನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಗುಡುಗಿದರು.
ಸಂವಿಧಾನ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಚಿವ ಅಶ್ವತ್ಥನಾರಾಯಣ್ ಅಪಮಾನ ಮಾಡಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮೇಲೆ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡು ಅಪಮಾನ ಮಾಡಿದ್ದಾರೆ ಕೂಡಲೇ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡಬೇಕು ಎಂದು ಒತ್ತಾಯ ಮಾಡಿದರು.
ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ ಸಿದ್ದರಾಮಯ್ಯ ನವರ ಏಳಿಗೆ ಸಹಿಸದ ಬಿಜೆಪಿ ನಾಯಕರು ಯಾವುದೇ ಕೀಳುಮಟ್ಟಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ರಾಜಕೀಯವಾಗಿ ನೇರಾನೇರ ಎದುರಿಸಲಾಗದವರು ಹಿಂಬಾಗಿಲಿನಿಂದ ಚೂರಿ ಹಾಕುವ ಕೆಲಸ ಮಾಡುತ್ತಾರೆ. ಈಗಿರುವ ಬಿಜೆಪಿ ಸರಕಾರ ಕೂಡ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿಲ್ಲ. ಸಂವಿಧಾನಕ್ಕೆ ವಿರೋಧವಾಗಿ ಶಾಸಕರನ್ನ ಖರೀದಿ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ರಾಜ್ಯದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕೆ ನಾಲಾಯಕ್ ಆಗಿರುವ ಅಶ್ವತ್ಥನಾರಾಯಣ್ ಅವರನ್ನು ರಾಜ್ಯಪಾಲರು ವಜಾ ಮಾಡಿ ಸಂವಿಧಾನ ಆಶಯವನ್ನು ಎತ್ತಿ ಹಿಡಿಯಬೇಕು ಎಂದರು.
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…
ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…
ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…
2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…