ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಪ್ರತಿಭಟನೆ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ವಿವಾದಾತ್ಮಕ ಭಾಷಣ ಮಾಡಿರುವ ಸಚಿವ ಅಶ್ವತ್ಥನಾರಾಯಣ್ ಅವರನ್ನು ಕೂಡಲೇ ಸಂಪುಟದಿಂದ ತೆಗೆದುಹಾಕಿ, ಕೊಲೆಗೆ ಪ್ರಚೋದನೆ ನೀಡಿರುವ ಪ್ರಕರಣದಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಡಿವೈಎಸ್ ಪಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಅದ್ದೆ ಮಂಜುನಾಥ, ಸ್ವಾತಂತ್ರ್ಯ ಪೂರ್ವದಲ್ಲಿ ದುಡಿಯುವ ವರ್ಗವನ್ನು ಕೀಳಾಗಿ ನೋಡಲಾಗುತ್ತಿತ್ತು. ಸಂವಿಧಾನ ಜಾರಿಯಾದ ಬಳಿಕ ಅಂತಹ ಕೀಳು ಪದ್ಧತಿ ಬದಲಾಗಿದೆ. ಆದರೆ ಮತ್ತೆ ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಳೆ ಚಾಳಿ ಮುಂದುವರೆಸಿದೆ. ಬ್ರಾಹ್ಮಣ, ಪುರೋಹಿತ ಶಾಹಿ ಪದ್ಧತಿಯನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಗುಡುಗಿದರು.

ಟಿಪ್ಪುವನ್ನು ಕೊಂದಿದ್ದು ಬ್ರಿಟಿಷರು ಇದಕ್ಕೆ ದಾಖಲೆಗಳಿವೆ. ಆದರೆ ಬಿಜೆಪಿ ನಾಯಕರು ಟಿಪ್ಪುವನ್ನು ಕೊಂದದ್ದು ಒಕ್ಕಲಿಗರು ಎಂದು ಹೇಳಿ ಒಕ್ಕಲಿಗರಿಗೆ ಅಪಮಾನ ಮಾಡುತ್ತಿದ್ದಾರೆ. ಟಿಪ್ಪು ಹೆಸರನ್ನು ದ್ವೇಷ ರಾಜಕೀಯಕ್ಕೆ ಬಳಕೆ ಮಾಡಲಾಗುತ್ತಿದೆ. ಆರ್.ಎಸ್ .ಎಸ್ ನವರು ಸಿಟಿ ರವಿ ಮತ್ತು ಅಶ್ವತ್ಥನಾರಾಯಣ್ ರನ್ನು ಬಿಟ್ಟು ಸಮಾಜದಲ್ಲಿ ಕಿಡಿ ಹಚ್ಚುತ್ತಿದ್ದಾರೆ. ಉರಿಗೌಡ, ನಂಜೇಗೌಡ ಬಗ್ಗೆ ಯಾವುದೇ ದಾಖಲೆಗಳಿಲ್ಲ, ಇದೆಲ್ಲಾ ಆರ್.ಎಸ್.ಎಸ್ ನ ಕಪೋಕಲ್ಪಿತ ಕಥೆಗಳು ಎಂದರು.

ಸಂವಿಧಾನ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಚಿವ ಅಶ್ವತ್ಥನಾರಾಯಣ್ ಅಪಮಾನ ಮಾಡಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮೇಲೆ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡು ಅಪಮಾನ ಮಾಡಿದ್ದಾರೆ ಕೂಡಲೇ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡಬೇಕು ಎಂದು ಒತ್ತಾಯ ಮಾಡಿದರು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ ಸಿದ್ದರಾಮಯ್ಯ ನವರ ಏಳಿಗೆ ಸಹಿಸದ ಬಿಜೆಪಿ ನಾಯಕರು ಯಾವುದೇ ಕೀಳುಮಟ್ಟಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ರಾಜಕೀಯವಾಗಿ ನೇರಾನೇರ ಎದುರಿಸಲಾಗದವರು ಹಿಂಬಾಗಿಲಿನಿಂದ ಚೂರಿ ಹಾಕುವ ಕೆಲಸ ಮಾಡುತ್ತಾರೆ. ಈಗಿರುವ ಬಿಜೆಪಿ ಸರಕಾರ ಕೂಡ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿಲ್ಲ. ಸಂವಿಧಾನಕ್ಕೆ ವಿರೋಧವಾಗಿ ಶಾಸಕರನ್ನ ಖರೀದಿ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ರಾಜ್ಯದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕೆ ನಾಲಾಯಕ್ ಆಗಿರುವ ಅಶ್ವತ್ಥನಾರಾಯಣ್ ಅವರನ್ನು ರಾಜ್ಯಪಾಲರು ವಜಾ ಮಾಡಿ ಸಂವಿಧಾನ ಆಶಯವನ್ನು ಎತ್ತಿ ಹಿಡಿಯಬೇಕು ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸಿ.ಆರ್ ಗೌಡ, ಕೆಪಿಸಿಸಿ ಸದಸ್ಯರಾದ ಖಲೀಂ ಉಲ್ಲಾ ಖಾನ್, ಹೇಮಂತರಾಜು, ಮಾಜಿ ಶಾಸಕ ಮುನಿನರಸಿಂಹಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಜಯಲಕ್ಷ್ಮಿ, ಮುಖಂಡರಾದ ಕೃಷ್ಣಮೂರ್ತಿ, ಬಷೀರ್, ರಾಜೇಶ್, ಕಾಂತರಾಜು ಮತ್ತಿತರರು ಇದ್ದರು.

Ramesh Babu

Journalist

Recent Posts

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

1 hour ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

2 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

7 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

19 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

20 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

20 hours ago