ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ವಿವಾದಾತ್ಮಕ ಭಾಷಣ ಮಾಡಿರುವ ಸಚಿವ ಅಶ್ವತ್ಥನಾರಾಯಣ್ ಅವರನ್ನು ಕೂಡಲೇ ಸಂಪುಟದಿಂದ ತೆಗೆದುಹಾಕಿ, ಕೊಲೆಗೆ ಪ್ರಚೋದನೆ ನೀಡಿರುವ ಪ್ರಕರಣದಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಡಿವೈಎಸ್ ಪಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಅದ್ದೆ ಮಂಜುನಾಥ, ಸ್ವಾತಂತ್ರ್ಯ ಪೂರ್ವದಲ್ಲಿ ದುಡಿಯುವ ವರ್ಗವನ್ನು ಕೀಳಾಗಿ ನೋಡಲಾಗುತ್ತಿತ್ತು. ಸಂವಿಧಾನ ಜಾರಿಯಾದ ಬಳಿಕ ಅಂತಹ ಕೀಳು ಪದ್ಧತಿ ಬದಲಾಗಿದೆ. ಆದರೆ ಮತ್ತೆ ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಳೆ ಚಾಳಿ ಮುಂದುವರೆಸಿದೆ. ಬ್ರಾಹ್ಮಣ, ಪುರೋಹಿತ ಶಾಹಿ ಪದ್ಧತಿಯನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಗುಡುಗಿದರು.
ಸಂವಿಧಾನ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಚಿವ ಅಶ್ವತ್ಥನಾರಾಯಣ್ ಅಪಮಾನ ಮಾಡಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮೇಲೆ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡು ಅಪಮಾನ ಮಾಡಿದ್ದಾರೆ ಕೂಡಲೇ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡಬೇಕು ಎಂದು ಒತ್ತಾಯ ಮಾಡಿದರು.
ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ ಸಿದ್ದರಾಮಯ್ಯ ನವರ ಏಳಿಗೆ ಸಹಿಸದ ಬಿಜೆಪಿ ನಾಯಕರು ಯಾವುದೇ ಕೀಳುಮಟ್ಟಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ರಾಜಕೀಯವಾಗಿ ನೇರಾನೇರ ಎದುರಿಸಲಾಗದವರು ಹಿಂಬಾಗಿಲಿನಿಂದ ಚೂರಿ ಹಾಕುವ ಕೆಲಸ ಮಾಡುತ್ತಾರೆ. ಈಗಿರುವ ಬಿಜೆಪಿ ಸರಕಾರ ಕೂಡ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿಲ್ಲ. ಸಂವಿಧಾನಕ್ಕೆ ವಿರೋಧವಾಗಿ ಶಾಸಕರನ್ನ ಖರೀದಿ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ರಾಜ್ಯದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕೆ ನಾಲಾಯಕ್ ಆಗಿರುವ ಅಶ್ವತ್ಥನಾರಾಯಣ್ ಅವರನ್ನು ರಾಜ್ಯಪಾಲರು ವಜಾ ಮಾಡಿ ಸಂವಿಧಾನ ಆಶಯವನ್ನು ಎತ್ತಿ ಹಿಡಿಯಬೇಕು ಎಂದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…