ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ವಿವಾದಾತ್ಮಕ ಭಾಷಣ ಮಾಡಿರುವ ಸಚಿವ ಅಶ್ವತ್ಥನಾರಾಯಣ್ ಅವರನ್ನು ಕೂಡಲೇ ಸಂಪುಟದಿಂದ ತೆಗೆದುಹಾಕಿ, ಕೊಲೆಗೆ ಪ್ರಚೋದನೆ ನೀಡಿರುವ ಪ್ರಕರಣದಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಡಿವೈಎಸ್ ಪಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಅದ್ದೆ ಮಂಜುನಾಥ, ಸ್ವಾತಂತ್ರ್ಯ ಪೂರ್ವದಲ್ಲಿ ದುಡಿಯುವ ವರ್ಗವನ್ನು ಕೀಳಾಗಿ ನೋಡಲಾಗುತ್ತಿತ್ತು. ಸಂವಿಧಾನ ಜಾರಿಯಾದ ಬಳಿಕ ಅಂತಹ ಕೀಳು ಪದ್ಧತಿ ಬದಲಾಗಿದೆ. ಆದರೆ ಮತ್ತೆ ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಳೆ ಚಾಳಿ ಮುಂದುವರೆಸಿದೆ. ಬ್ರಾಹ್ಮಣ, ಪುರೋಹಿತ ಶಾಹಿ ಪದ್ಧತಿಯನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಗುಡುಗಿದರು.
ಸಂವಿಧಾನ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಚಿವ ಅಶ್ವತ್ಥನಾರಾಯಣ್ ಅಪಮಾನ ಮಾಡಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮೇಲೆ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡು ಅಪಮಾನ ಮಾಡಿದ್ದಾರೆ ಕೂಡಲೇ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡಬೇಕು ಎಂದು ಒತ್ತಾಯ ಮಾಡಿದರು.
ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ ಸಿದ್ದರಾಮಯ್ಯ ನವರ ಏಳಿಗೆ ಸಹಿಸದ ಬಿಜೆಪಿ ನಾಯಕರು ಯಾವುದೇ ಕೀಳುಮಟ್ಟಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ರಾಜಕೀಯವಾಗಿ ನೇರಾನೇರ ಎದುರಿಸಲಾಗದವರು ಹಿಂಬಾಗಿಲಿನಿಂದ ಚೂರಿ ಹಾಕುವ ಕೆಲಸ ಮಾಡುತ್ತಾರೆ. ಈಗಿರುವ ಬಿಜೆಪಿ ಸರಕಾರ ಕೂಡ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿಲ್ಲ. ಸಂವಿಧಾನಕ್ಕೆ ವಿರೋಧವಾಗಿ ಶಾಸಕರನ್ನ ಖರೀದಿ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ರಾಜ್ಯದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕೆ ನಾಲಾಯಕ್ ಆಗಿರುವ ಅಶ್ವತ್ಥನಾರಾಯಣ್ ಅವರನ್ನು ರಾಜ್ಯಪಾಲರು ವಜಾ ಮಾಡಿ ಸಂವಿಧಾನ ಆಶಯವನ್ನು ಎತ್ತಿ ಹಿಡಿಯಬೇಕು ಎಂದರು.
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೆರೆಯಲ್ಲಿ ಅಕ್ರಮ ಮಣ್ಣು ದಂಧೆ ಬೆಳಕಿಗೆ ಬಂದಿದ್ದು, ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್…