ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಪ್ರತಿಭಟನೆ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ವಿವಾದಾತ್ಮಕ ಭಾಷಣ ಮಾಡಿರುವ ಸಚಿವ ಅಶ್ವತ್ಥನಾರಾಯಣ್ ಅವರನ್ನು ಕೂಡಲೇ ಸಂಪುಟದಿಂದ ತೆಗೆದುಹಾಕಿ, ಕೊಲೆಗೆ ಪ್ರಚೋದನೆ ನೀಡಿರುವ ಪ್ರಕರಣದಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಡಿವೈಎಸ್ ಪಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಅದ್ದೆ ಮಂಜುನಾಥ, ಸ್ವಾತಂತ್ರ್ಯ ಪೂರ್ವದಲ್ಲಿ ದುಡಿಯುವ ವರ್ಗವನ್ನು ಕೀಳಾಗಿ ನೋಡಲಾಗುತ್ತಿತ್ತು. ಸಂವಿಧಾನ ಜಾರಿಯಾದ ಬಳಿಕ ಅಂತಹ ಕೀಳು ಪದ್ಧತಿ ಬದಲಾಗಿದೆ. ಆದರೆ ಮತ್ತೆ ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಳೆ ಚಾಳಿ ಮುಂದುವರೆಸಿದೆ. ಬ್ರಾಹ್ಮಣ, ಪುರೋಹಿತ ಶಾಹಿ ಪದ್ಧತಿಯನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಗುಡುಗಿದರು.

ಟಿಪ್ಪುವನ್ನು ಕೊಂದಿದ್ದು ಬ್ರಿಟಿಷರು ಇದಕ್ಕೆ ದಾಖಲೆಗಳಿವೆ. ಆದರೆ ಬಿಜೆಪಿ ನಾಯಕರು ಟಿಪ್ಪುವನ್ನು ಕೊಂದದ್ದು ಒಕ್ಕಲಿಗರು ಎಂದು ಹೇಳಿ ಒಕ್ಕಲಿಗರಿಗೆ ಅಪಮಾನ ಮಾಡುತ್ತಿದ್ದಾರೆ. ಟಿಪ್ಪು ಹೆಸರನ್ನು ದ್ವೇಷ ರಾಜಕೀಯಕ್ಕೆ ಬಳಕೆ ಮಾಡಲಾಗುತ್ತಿದೆ. ಆರ್.ಎಸ್ .ಎಸ್ ನವರು ಸಿಟಿ ರವಿ ಮತ್ತು ಅಶ್ವತ್ಥನಾರಾಯಣ್ ರನ್ನು ಬಿಟ್ಟು ಸಮಾಜದಲ್ಲಿ ಕಿಡಿ ಹಚ್ಚುತ್ತಿದ್ದಾರೆ. ಉರಿಗೌಡ, ನಂಜೇಗೌಡ ಬಗ್ಗೆ ಯಾವುದೇ ದಾಖಲೆಗಳಿಲ್ಲ, ಇದೆಲ್ಲಾ ಆರ್.ಎಸ್.ಎಸ್ ನ ಕಪೋಕಲ್ಪಿತ ಕಥೆಗಳು ಎಂದರು.

ಸಂವಿಧಾನ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಚಿವ ಅಶ್ವತ್ಥನಾರಾಯಣ್ ಅಪಮಾನ ಮಾಡಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮೇಲೆ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡು ಅಪಮಾನ ಮಾಡಿದ್ದಾರೆ ಕೂಡಲೇ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡಬೇಕು ಎಂದು ಒತ್ತಾಯ ಮಾಡಿದರು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ ಸಿದ್ದರಾಮಯ್ಯ ನವರ ಏಳಿಗೆ ಸಹಿಸದ ಬಿಜೆಪಿ ನಾಯಕರು ಯಾವುದೇ ಕೀಳುಮಟ್ಟಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ರಾಜಕೀಯವಾಗಿ ನೇರಾನೇರ ಎದುರಿಸಲಾಗದವರು ಹಿಂಬಾಗಿಲಿನಿಂದ ಚೂರಿ ಹಾಕುವ ಕೆಲಸ ಮಾಡುತ್ತಾರೆ. ಈಗಿರುವ ಬಿಜೆಪಿ ಸರಕಾರ ಕೂಡ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿಲ್ಲ. ಸಂವಿಧಾನಕ್ಕೆ ವಿರೋಧವಾಗಿ ಶಾಸಕರನ್ನ ಖರೀದಿ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ರಾಜ್ಯದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕೆ ನಾಲಾಯಕ್ ಆಗಿರುವ ಅಶ್ವತ್ಥನಾರಾಯಣ್ ಅವರನ್ನು ರಾಜ್ಯಪಾಲರು ವಜಾ ಮಾಡಿ ಸಂವಿಧಾನ ಆಶಯವನ್ನು ಎತ್ತಿ ಹಿಡಿಯಬೇಕು ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸಿ.ಆರ್ ಗೌಡ, ಕೆಪಿಸಿಸಿ ಸದಸ್ಯರಾದ ಖಲೀಂ ಉಲ್ಲಾ ಖಾನ್, ಹೇಮಂತರಾಜು, ಮಾಜಿ ಶಾಸಕ ಮುನಿನರಸಿಂಹಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಜಯಲಕ್ಷ್ಮಿ, ಮುಖಂಡರಾದ ಕೃಷ್ಣಮೂರ್ತಿ, ಬಷೀರ್, ರಾಜೇಶ್, ಕಾಂತರಾಜು ಮತ್ತಿತರರು ಇದ್ದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 hour ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago