ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಪ್ರತಿಭಟನೆ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ವಿವಾದಾತ್ಮಕ ಭಾಷಣ ಮಾಡಿರುವ ಸಚಿವ ಅಶ್ವತ್ಥನಾರಾಯಣ್ ಅವರನ್ನು ಕೂಡಲೇ ಸಂಪುಟದಿಂದ ತೆಗೆದುಹಾಕಿ, ಕೊಲೆಗೆ ಪ್ರಚೋದನೆ ನೀಡಿರುವ ಪ್ರಕರಣದಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಡಿವೈಎಸ್ ಪಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಅದ್ದೆ ಮಂಜುನಾಥ, ಸ್ವಾತಂತ್ರ್ಯ ಪೂರ್ವದಲ್ಲಿ ದುಡಿಯುವ ವರ್ಗವನ್ನು ಕೀಳಾಗಿ ನೋಡಲಾಗುತ್ತಿತ್ತು. ಸಂವಿಧಾನ ಜಾರಿಯಾದ ಬಳಿಕ ಅಂತಹ ಕೀಳು ಪದ್ಧತಿ ಬದಲಾಗಿದೆ. ಆದರೆ ಮತ್ತೆ ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಳೆ ಚಾಳಿ ಮುಂದುವರೆಸಿದೆ. ಬ್ರಾಹ್ಮಣ, ಪುರೋಹಿತ ಶಾಹಿ ಪದ್ಧತಿಯನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಗುಡುಗಿದರು.

ಟಿಪ್ಪುವನ್ನು ಕೊಂದಿದ್ದು ಬ್ರಿಟಿಷರು ಇದಕ್ಕೆ ದಾಖಲೆಗಳಿವೆ. ಆದರೆ ಬಿಜೆಪಿ ನಾಯಕರು ಟಿಪ್ಪುವನ್ನು ಕೊಂದದ್ದು ಒಕ್ಕಲಿಗರು ಎಂದು ಹೇಳಿ ಒಕ್ಕಲಿಗರಿಗೆ ಅಪಮಾನ ಮಾಡುತ್ತಿದ್ದಾರೆ. ಟಿಪ್ಪು ಹೆಸರನ್ನು ದ್ವೇಷ ರಾಜಕೀಯಕ್ಕೆ ಬಳಕೆ ಮಾಡಲಾಗುತ್ತಿದೆ. ಆರ್.ಎಸ್ .ಎಸ್ ನವರು ಸಿಟಿ ರವಿ ಮತ್ತು ಅಶ್ವತ್ಥನಾರಾಯಣ್ ರನ್ನು ಬಿಟ್ಟು ಸಮಾಜದಲ್ಲಿ ಕಿಡಿ ಹಚ್ಚುತ್ತಿದ್ದಾರೆ. ಉರಿಗೌಡ, ನಂಜೇಗೌಡ ಬಗ್ಗೆ ಯಾವುದೇ ದಾಖಲೆಗಳಿಲ್ಲ, ಇದೆಲ್ಲಾ ಆರ್.ಎಸ್.ಎಸ್ ನ ಕಪೋಕಲ್ಪಿತ ಕಥೆಗಳು ಎಂದರು.

ಸಂವಿಧಾನ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಚಿವ ಅಶ್ವತ್ಥನಾರಾಯಣ್ ಅಪಮಾನ ಮಾಡಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮೇಲೆ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡು ಅಪಮಾನ ಮಾಡಿದ್ದಾರೆ ಕೂಡಲೇ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡಬೇಕು ಎಂದು ಒತ್ತಾಯ ಮಾಡಿದರು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ ಸಿದ್ದರಾಮಯ್ಯ ನವರ ಏಳಿಗೆ ಸಹಿಸದ ಬಿಜೆಪಿ ನಾಯಕರು ಯಾವುದೇ ಕೀಳುಮಟ್ಟಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ರಾಜಕೀಯವಾಗಿ ನೇರಾನೇರ ಎದುರಿಸಲಾಗದವರು ಹಿಂಬಾಗಿಲಿನಿಂದ ಚೂರಿ ಹಾಕುವ ಕೆಲಸ ಮಾಡುತ್ತಾರೆ. ಈಗಿರುವ ಬಿಜೆಪಿ ಸರಕಾರ ಕೂಡ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿಲ್ಲ. ಸಂವಿಧಾನಕ್ಕೆ ವಿರೋಧವಾಗಿ ಶಾಸಕರನ್ನ ಖರೀದಿ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ರಾಜ್ಯದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕೆ ನಾಲಾಯಕ್ ಆಗಿರುವ ಅಶ್ವತ್ಥನಾರಾಯಣ್ ಅವರನ್ನು ರಾಜ್ಯಪಾಲರು ವಜಾ ಮಾಡಿ ಸಂವಿಧಾನ ಆಶಯವನ್ನು ಎತ್ತಿ ಹಿಡಿಯಬೇಕು ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸಿ.ಆರ್ ಗೌಡ, ಕೆಪಿಸಿಸಿ ಸದಸ್ಯರಾದ ಖಲೀಂ ಉಲ್ಲಾ ಖಾನ್, ಹೇಮಂತರಾಜು, ಮಾಜಿ ಶಾಸಕ ಮುನಿನರಸಿಂಹಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಜಯಲಕ್ಷ್ಮಿ, ಮುಖಂಡರಾದ ಕೃಷ್ಣಮೂರ್ತಿ, ಬಷೀರ್, ರಾಜೇಶ್, ಕಾಂತರಾಜು ಮತ್ತಿತರರು ಇದ್ದರು.

Ramesh Babu

Journalist

Recent Posts

ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…

2 hours ago

ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…

6 hours ago

ಗಂಟಿಗಾನಹಳ್ಳಿಯಲ್ಲಿ ಮೇ.3ರಂದು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ: ರಂಗೋಲಿ ಸ್ಪರ್ಧೆ, ವಾಲಿಬಾಲ್ ಪಂದ್ಯಾವಳಿ, ಆರ್ಕೆಸ್ಟ್ರಾ ಆಯೋಜನೆ

ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…

8 hours ago

ಗೋಡೆ ಕೊರೆದು ಕೋಟ್ಯಂತರ ರೂ. ಮೌಲ್ಯದ ಬೆಳ್ಳಿ ಕಳವು

ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…

10 hours ago

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌ ಜಾರಿಗೆ ಸಿಎಂ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು ಏಳು‌ ಮಂದಿ ಸಾವು ಪ್ರಕರಣ: ಇಂಜಿನಿಯರ್‌ ರನ್ನು ಅಮಾನತುಗೊಳಿಸಿ, ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್‌…

1 day ago

ಸಂಭ್ರಮದ ಹಸಿ ಕರಗ ಮಹೋತ್ಸವ

ದೊಡ್ಡಬಳ್ಳಾಪುರ ನಗರದ ಚಿಕ್ಕಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಆದಿಶಕ್ತ್ಯಾತ್ಮಕ ದ್ರೌಪದಾದೇವಿ ಕರಗ ಮಹಹೋತ್ಸವ ಅಂಗವಾಗಿ ಹಸಿ ಕರಗ ಉತ್ಸವ ಸಂಭ್ರಮದಿಂದ…

1 day ago