ಸಚಿವ ಅಶ್ವತ್ಥ ನಾರಾಯಣ ಹೇಳಿಕೆ ಖಂಡಿಸಿ ಪ್ರತಿಭಟನೆ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ವಿವಾದಾತ್ಮಕ ಭಾಷಣ ಮಾಡಿರುವ ಸಚಿವ ಅಶ್ವತ್ಥನಾರಾಯಣ್ ಅವರನ್ನು ಕೂಡಲೇ ಸಂಪುಟದಿಂದ ತೆಗೆದುಹಾಕಿ, ಕೊಲೆಗೆ ಪ್ರಚೋದನೆ ನೀಡಿರುವ ಪ್ರಕರಣದಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಡಿವೈಎಸ್ ಪಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.

ಈ ವೇಳೆ ಮಾತನಾಡಿದ ಅದ್ದೆ ಮಂಜುನಾಥ, ಸ್ವಾತಂತ್ರ್ಯ ಪೂರ್ವದಲ್ಲಿ ದುಡಿಯುವ ವರ್ಗವನ್ನು ಕೀಳಾಗಿ ನೋಡಲಾಗುತ್ತಿತ್ತು. ಸಂವಿಧಾನ ಜಾರಿಯಾದ ಬಳಿಕ ಅಂತಹ ಕೀಳು ಪದ್ಧತಿ ಬದಲಾಗಿದೆ. ಆದರೆ ಮತ್ತೆ ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಳೆ ಚಾಳಿ ಮುಂದುವರೆಸಿದೆ. ಬ್ರಾಹ್ಮಣ, ಪುರೋಹಿತ ಶಾಹಿ ಪದ್ಧತಿಯನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಗುಡುಗಿದರು.

ಟಿಪ್ಪುವನ್ನು ಕೊಂದಿದ್ದು ಬ್ರಿಟಿಷರು ಇದಕ್ಕೆ ದಾಖಲೆಗಳಿವೆ. ಆದರೆ ಬಿಜೆಪಿ ನಾಯಕರು ಟಿಪ್ಪುವನ್ನು ಕೊಂದದ್ದು ಒಕ್ಕಲಿಗರು ಎಂದು ಹೇಳಿ ಒಕ್ಕಲಿಗರಿಗೆ ಅಪಮಾನ ಮಾಡುತ್ತಿದ್ದಾರೆ. ಟಿಪ್ಪು ಹೆಸರನ್ನು ದ್ವೇಷ ರಾಜಕೀಯಕ್ಕೆ ಬಳಕೆ ಮಾಡಲಾಗುತ್ತಿದೆ. ಆರ್.ಎಸ್ .ಎಸ್ ನವರು ಸಿಟಿ ರವಿ ಮತ್ತು ಅಶ್ವತ್ಥನಾರಾಯಣ್ ರನ್ನು ಬಿಟ್ಟು ಸಮಾಜದಲ್ಲಿ ಕಿಡಿ ಹಚ್ಚುತ್ತಿದ್ದಾರೆ. ಉರಿಗೌಡ, ನಂಜೇಗೌಡ ಬಗ್ಗೆ ಯಾವುದೇ ದಾಖಲೆಗಳಿಲ್ಲ, ಇದೆಲ್ಲಾ ಆರ್.ಎಸ್.ಎಸ್ ನ ಕಪೋಕಲ್ಪಿತ ಕಥೆಗಳು ಎಂದರು.

ಸಂವಿಧಾನ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಚಿವ ಅಶ್ವತ್ಥನಾರಾಯಣ್ ಅಪಮಾನ ಮಾಡಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮೇಲೆ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡು ಅಪಮಾನ ಮಾಡಿದ್ದಾರೆ ಕೂಡಲೇ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡಬೇಕು ಎಂದು ಒತ್ತಾಯ ಮಾಡಿದರು.

ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ ಸಿದ್ದರಾಮಯ್ಯ ನವರ ಏಳಿಗೆ ಸಹಿಸದ ಬಿಜೆಪಿ ನಾಯಕರು ಯಾವುದೇ ಕೀಳುಮಟ್ಟಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ರಾಜಕೀಯವಾಗಿ ನೇರಾನೇರ ಎದುರಿಸಲಾಗದವರು ಹಿಂಬಾಗಿಲಿನಿಂದ ಚೂರಿ ಹಾಕುವ ಕೆಲಸ ಮಾಡುತ್ತಾರೆ. ಈಗಿರುವ ಬಿಜೆಪಿ ಸರಕಾರ ಕೂಡ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿಲ್ಲ. ಸಂವಿಧಾನಕ್ಕೆ ವಿರೋಧವಾಗಿ ಶಾಸಕರನ್ನ ಖರೀದಿ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ರಾಜ್ಯದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕೆ ನಾಲಾಯಕ್ ಆಗಿರುವ ಅಶ್ವತ್ಥನಾರಾಯಣ್ ಅವರನ್ನು ರಾಜ್ಯಪಾಲರು ವಜಾ ಮಾಡಿ ಸಂವಿಧಾನ ಆಶಯವನ್ನು ಎತ್ತಿ ಹಿಡಿಯಬೇಕು ಎಂದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸಿ.ಆರ್ ಗೌಡ, ಕೆಪಿಸಿಸಿ ಸದಸ್ಯರಾದ ಖಲೀಂ ಉಲ್ಲಾ ಖಾನ್, ಹೇಮಂತರಾಜು, ಮಾಜಿ ಶಾಸಕ ಮುನಿನರಸಿಂಹಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್, ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಜಯಲಕ್ಷ್ಮಿ, ಮುಖಂಡರಾದ ಕೃಷ್ಣಮೂರ್ತಿ, ಬಷೀರ್, ರಾಜೇಶ್, ಕಾಂತರಾಜು ಮತ್ತಿತರರು ಇದ್ದರು.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

3 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

4 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

5 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

6 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

9 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

12 hours ago