ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ವಿವಾದಾತ್ಮಕ ಭಾಷಣ ಮಾಡಿರುವ ಸಚಿವ ಅಶ್ವತ್ಥನಾರಾಯಣ್ ಅವರನ್ನು ಕೂಡಲೇ ಸಂಪುಟದಿಂದ ತೆಗೆದುಹಾಕಿ, ಕೊಲೆಗೆ ಪ್ರಚೋದನೆ ನೀಡಿರುವ ಪ್ರಕರಣದಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಡಿವೈಎಸ್ ಪಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಅದ್ದೆ ಮಂಜುನಾಥ, ಸ್ವಾತಂತ್ರ್ಯ ಪೂರ್ವದಲ್ಲಿ ದುಡಿಯುವ ವರ್ಗವನ್ನು ಕೀಳಾಗಿ ನೋಡಲಾಗುತ್ತಿತ್ತು. ಸಂವಿಧಾನ ಜಾರಿಯಾದ ಬಳಿಕ ಅಂತಹ ಕೀಳು ಪದ್ಧತಿ ಬದಲಾಗಿದೆ. ಆದರೆ ಮತ್ತೆ ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಳೆ ಚಾಳಿ ಮುಂದುವರೆಸಿದೆ. ಬ್ರಾಹ್ಮಣ, ಪುರೋಹಿತ ಶಾಹಿ ಪದ್ಧತಿಯನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಗುಡುಗಿದರು.
ಸಂವಿಧಾನ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಚಿವ ಅಶ್ವತ್ಥನಾರಾಯಣ್ ಅಪಮಾನ ಮಾಡಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮೇಲೆ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡು ಅಪಮಾನ ಮಾಡಿದ್ದಾರೆ ಕೂಡಲೇ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡಬೇಕು ಎಂದು ಒತ್ತಾಯ ಮಾಡಿದರು.
ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ ಸಿದ್ದರಾಮಯ್ಯ ನವರ ಏಳಿಗೆ ಸಹಿಸದ ಬಿಜೆಪಿ ನಾಯಕರು ಯಾವುದೇ ಕೀಳುಮಟ್ಟಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ರಾಜಕೀಯವಾಗಿ ನೇರಾನೇರ ಎದುರಿಸಲಾಗದವರು ಹಿಂಬಾಗಿಲಿನಿಂದ ಚೂರಿ ಹಾಕುವ ಕೆಲಸ ಮಾಡುತ್ತಾರೆ. ಈಗಿರುವ ಬಿಜೆಪಿ ಸರಕಾರ ಕೂಡ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿಲ್ಲ. ಸಂವಿಧಾನಕ್ಕೆ ವಿರೋಧವಾಗಿ ಶಾಸಕರನ್ನ ಖರೀದಿ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ರಾಜ್ಯದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕೆ ನಾಲಾಯಕ್ ಆಗಿರುವ ಅಶ್ವತ್ಥನಾರಾಯಣ್ ಅವರನ್ನು ರಾಜ್ಯಪಾಲರು ವಜಾ ಮಾಡಿ ಸಂವಿಧಾನ ಆಶಯವನ್ನು ಎತ್ತಿ ಹಿಡಿಯಬೇಕು ಎಂದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…