ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ವಿವಾದಾತ್ಮಕ ಭಾಷಣ ಮಾಡಿರುವ ಸಚಿವ ಅಶ್ವತ್ಥನಾರಾಯಣ್ ಅವರನ್ನು ಕೂಡಲೇ ಸಂಪುಟದಿಂದ ತೆಗೆದುಹಾಕಿ, ಕೊಲೆಗೆ ಪ್ರಚೋದನೆ ನೀಡಿರುವ ಪ್ರಕರಣದಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಡಿವೈಎಸ್ ಪಿ ಕಚೇರಿ ಮುಂಭಾಗ ಪ್ರತಿಭಟನೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಅದ್ದೆ ಮಂಜುನಾಥ, ಸ್ವಾತಂತ್ರ್ಯ ಪೂರ್ವದಲ್ಲಿ ದುಡಿಯುವ ವರ್ಗವನ್ನು ಕೀಳಾಗಿ ನೋಡಲಾಗುತ್ತಿತ್ತು. ಸಂವಿಧಾನ ಜಾರಿಯಾದ ಬಳಿಕ ಅಂತಹ ಕೀಳು ಪದ್ಧತಿ ಬದಲಾಗಿದೆ. ಆದರೆ ಮತ್ತೆ ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದ ಬಳಿಕ ಹಳೆ ಚಾಳಿ ಮುಂದುವರೆಸಿದೆ. ಬ್ರಾಹ್ಮಣ, ಪುರೋಹಿತ ಶಾಹಿ ಪದ್ಧತಿಯನ್ನು ಜಾರಿಗೊಳಿಸುತ್ತಿದ್ದಾರೆ ಎಂದು ಗುಡುಗಿದರು.
ಸಂವಿಧಾನ ವ್ಯಾಪ್ತಿಯಲ್ಲಿ ಪೊಲೀಸ್ ಇಲಾಖೆಗೆ ಸಚಿವ ಅಶ್ವತ್ಥನಾರಾಯಣ್ ಅಪಮಾನ ಮಾಡಿದ್ದಾರೆ. ಸಂವಿಧಾನದ ಮೇಲೆ ಪ್ರಮಾಣ ಮಾಡಿದ ಮೇಲೆ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡು ಅಪಮಾನ ಮಾಡಿದ್ದಾರೆ ಕೂಡಲೇ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಕೇಸ್ ದಾಖಲಿಸಿ ಬಂಧನ ಮಾಡಬೇಕು ಎಂದು ಒತ್ತಾಯ ಮಾಡಿದರು.
ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಜಿ.ಲಕ್ಷ್ಮೀಪತಿ ಮಾತನಾಡಿ ಸಿದ್ದರಾಮಯ್ಯ ನವರ ಏಳಿಗೆ ಸಹಿಸದ ಬಿಜೆಪಿ ನಾಯಕರು ಯಾವುದೇ ಕೀಳುಮಟ್ಟಕ್ಕೆ ಇಳಿಯಲು ಸಿದ್ಧರಾಗಿದ್ದಾರೆ. ರಾಜಕೀಯವಾಗಿ ನೇರಾನೇರ ಎದುರಿಸಲಾಗದವರು ಹಿಂಬಾಗಿಲಿನಿಂದ ಚೂರಿ ಹಾಕುವ ಕೆಲಸ ಮಾಡುತ್ತಾರೆ. ಈಗಿರುವ ಬಿಜೆಪಿ ಸರಕಾರ ಕೂಡ ಸ್ವತಂತ್ರವಾಗಿ ಅಧಿಕಾರಕ್ಕೆ ಬಂದಿಲ್ಲ. ಸಂವಿಧಾನಕ್ಕೆ ವಿರೋಧವಾಗಿ ಶಾಸಕರನ್ನ ಖರೀದಿ ಮಾಡಿ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದು ರಾಜ್ಯದ ಶಾಂತಿಯನ್ನು ಹಾಳು ಮಾಡುತ್ತಿದ್ದಾರೆ. ಸಚಿವ ಸ್ಥಾನಕ್ಕೆ ನಾಲಾಯಕ್ ಆಗಿರುವ ಅಶ್ವತ್ಥನಾರಾಯಣ್ ಅವರನ್ನು ರಾಜ್ಯಪಾಲರು ವಜಾ ಮಾಡಿ ಸಂವಿಧಾನ ಆಶಯವನ್ನು ಎತ್ತಿ ಹಿಡಿಯಬೇಕು ಎಂದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…