ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ ಬದಲಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಜೊತೆಗೆ ಸಚಿವ ಸಂಪುಟ ಪುನರ್ ರಚನೆಯೂ ಆಗುವ ಕಾಲ ಬಂದಿದೆ. 7 ಬಾರಿ ಸಂಸದರು ಕೇಂದ್ರ ಸಚಿವರೂ ಆಗಿ ಅಪಾರ ಅನುಭವ ಹೊಂದಿ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಿರಿಯ ಮತ್ಸದ್ದಿ ಕೆ.ಎಚ್. ಮುನಿಯಪ್ಪನವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆ.ಎಚ್.ಎಂ ಅಭಿಮಾನಿ ಸಂಘದ ಅಧ್ಯಕ್ಷ ಆರ್.ವಿ ಮಹೇಶ್ ಅವರು ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಅನುಭವಿ ಹಿರಿಯ ಕಾಂಗ್ರೆಸ್ಸಿಗರಾದ ಮುನಿಯಪ್ಪನವರಿಗೆ ಅರ್ಹತೆಗೆ ತಕ್ಕಂತ ಸಚಿವ ಸ್ಥಾನ ದೊರೆತಿರಲಿಲ್ಲ ಈಗ ಬದಲಾವಣೆ ಪರ್ವದಲ್ಲಿ ಅವರನ್ನು ಗುರ್ತಿಸಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದರು.
ಕೇಂದ್ರ ಸಚಿವರಾಗಿ ಅನುಭವವಿದ್ದ ಮುನಿಯಪ್ಪನವರು ರಾಜ್ಯದಲ್ಲಿ ಗ್ಯಾರಂಟೀ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಂತಹ ಅಕ್ಕಿ ವಿತರಣೆಯ ಆಹಾರ ನಾಗರಿಕ ಸರಬರಾಜು ಸಚಿವರಾಗಿ ಮೂರು ವರ್ಷಗಳಿಂದ ಅತ್ಯತ್ತಮ ಸೇವೆ ಸೇವೆ ಸಲ್ಲಿಸಿದ್ದು ಈಗ ಡಿಕೆ ಶಿವಕುಮಾರ್ ರವರ ಸಂಪುಟದಲ್ಲಿ ಇವರಿಗೆ ಡಿಸಿಎಂ. ಸ್ಥಾನ ನೀಡಲೇ ಬೇಕೆಂದರು.
ಮುನಿಯಪ್ಪನವರು ನಮ್ಮ ಕ್ಷೇತ್ರಕ್ಕೆ ಬಂದ ಮೇಲೆ ಇಲ್ಲಿಂದ ಸಚಿವರಾಗಿ ಯಾರೂ ಆಗಿಲ್ಲ ಎಂಬ ಕಳಂಕ ದೂರವಾಯಿತು. ಅವರು 1968 ರಲ್ಲಿಯೇ ತಾಲೂಕು ಬೋರ್ಡ್ ಅಧ್ಯಕ್ಷರಾಗಿದ್ದವರು ಶಂಕರಾನಂದ ಬಿಟ್ಟರೆ ಮುನಿಯಪ್ಪನವರೇ 7 ಬಾರಿ ಸಂಸದರಾಗಿದ್ದವರು ಅಂತಹವರು ರಾಹುಲ್ ಗಾಂಧೀ ಸೂಚನೆಯಂತೆ ಇಲ್ಲಿ ಬದು ನಿಂತು ಸಚಿವರಾದರು ಅವರು ಕೇಳಿದ ಸ್ಥಾನ ಬೇರೆ ಕೊಟ್ಟ ಖಾತೆಯೇ ಬೇರೆ ಆದರೂ ಅವರು ಯಾವುದಕ್ಕು ಆಸೆ ಪಡದೆ ಪಕ್ಷ ನಿಷ್ಟರಾಗಿದ್ದಾರೆ. ಹಾಗಾಗಿ ಅಂತಹ ಅನುಭವಿ ರಾಜಕಾರಣಿಗೆ ಹೊಸ ಸಂಪುಟದಲ್ಲಿ ಡಿಸಿಎಂ ಸ್ಥಾನ ಮೊದಲ ಆದ್ಯತೆಯಾಗಿ ನೀಡಬೇಕೆಂದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…