ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ ಬದಲಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಜೊತೆಗೆ ಸಚಿವ ಸಂಪುಟ ಪುನರ್ ರಚನೆಯೂ ಆಗುವ ಕಾಲ ಬಂದಿದೆ. 7 ಬಾರಿ ಸಂಸದರು ಕೇಂದ್ರ ಸಚಿವರೂ ಆಗಿ ಅಪಾರ ಅನುಭವ ಹೊಂದಿ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಿರಿಯ ಮತ್ಸದ್ದಿ ಕೆ.ಎಚ್. ಮುನಿಯಪ್ಪನವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆ.ಎಚ್.ಎಂ ಅಭಿಮಾನಿ ಸಂಘದ ಅಧ್ಯಕ್ಷ ಆರ್.ವಿ ಮಹೇಶ್ ಅವರು ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಅನುಭವಿ ಹಿರಿಯ ಕಾಂಗ್ರೆಸ್ಸಿಗರಾದ ಮುನಿಯಪ್ಪನವರಿಗೆ ಅರ್ಹತೆಗೆ ತಕ್ಕಂತ ಸಚಿವ ಸ್ಥಾನ ದೊರೆತಿರಲಿಲ್ಲ ಈಗ ಬದಲಾವಣೆ ಪರ್ವದಲ್ಲಿ ಅವರನ್ನು ಗುರ್ತಿಸಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದರು.
ಕೇಂದ್ರ ಸಚಿವರಾಗಿ ಅನುಭವವಿದ್ದ ಮುನಿಯಪ್ಪನವರು ರಾಜ್ಯದಲ್ಲಿ ಗ್ಯಾರಂಟೀ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಂತಹ ಅಕ್ಕಿ ವಿತರಣೆಯ ಆಹಾರ ನಾಗರಿಕ ಸರಬರಾಜು ಸಚಿವರಾಗಿ ಮೂರು ವರ್ಷಗಳಿಂದ ಅತ್ಯತ್ತಮ ಸೇವೆ ಸೇವೆ ಸಲ್ಲಿಸಿದ್ದು ಈಗ ಡಿಕೆ ಶಿವಕುಮಾರ್ ರವರ ಸಂಪುಟದಲ್ಲಿ ಇವರಿಗೆ ಡಿಸಿಎಂ. ಸ್ಥಾನ ನೀಡಲೇ ಬೇಕೆಂದರು.
ಮುನಿಯಪ್ಪನವರು ನಮ್ಮ ಕ್ಷೇತ್ರಕ್ಕೆ ಬಂದ ಮೇಲೆ ಇಲ್ಲಿಂದ ಸಚಿವರಾಗಿ ಯಾರೂ ಆಗಿಲ್ಲ ಎಂಬ ಕಳಂಕ ದೂರವಾಯಿತು. ಅವರು 1968 ರಲ್ಲಿಯೇ ತಾಲೂಕು ಬೋರ್ಡ್ ಅಧ್ಯಕ್ಷರಾಗಿದ್ದವರು ಶಂಕರಾನಂದ ಬಿಟ್ಟರೆ ಮುನಿಯಪ್ಪನವರೇ 7 ಬಾರಿ ಸಂಸದರಾಗಿದ್ದವರು ಅಂತಹವರು ರಾಹುಲ್ ಗಾಂಧೀ ಸೂಚನೆಯಂತೆ ಇಲ್ಲಿ ಬದು ನಿಂತು ಸಚಿವರಾದರು ಅವರು ಕೇಳಿದ ಸ್ಥಾನ ಬೇರೆ ಕೊಟ್ಟ ಖಾತೆಯೇ ಬೇರೆ ಆದರೂ ಅವರು ಯಾವುದಕ್ಕು ಆಸೆ ಪಡದೆ ಪಕ್ಷ ನಿಷ್ಟರಾಗಿದ್ದಾರೆ. ಹಾಗಾಗಿ ಅಂತಹ ಅನುಭವಿ ರಾಜಕಾರಣಿಗೆ ಹೊಸ ಸಂಪುಟದಲ್ಲಿ ಡಿಸಿಎಂ ಸ್ಥಾನ ಮೊದಲ ಆದ್ಯತೆಯಾಗಿ ನೀಡಬೇಕೆಂದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ: ರಾಜ್ಯದ ಜನತೆಗೆ ಸಿದ್ದು ಕೃತಜ್ಞತೆಯ ಮಾತು * ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ…
ಬೆಂಗಳೂರು ಗ್ರಾಮಾಂತರ: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ನಡುವೆಯೇ, ಶಾಸಕ ಬೇಳೂರು ಗೋಪಾಲಕೃಷ್ಣ ಮಹತ್ವದ ಹೇಳಿಕೆ ನೀಡಿದ್ದಾರೆ.…
ಬೆಂಗಳೂರು ಗ್ರಾಮಾಂತರ:- ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿರುವ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ…
ದೇವನಹಳ್ಳಿ:- ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನರ್ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ…
ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ…
ನಾನು ರಾಷ್ಟ್ರ ರಾಜಕಾರಣಕ್ಕೆ(ರಾಜ್ಯಸಭೆ) ಹೋಗಲ್ಲ. ರಾಜ್ಯದಲ್ಲೇ ಇದ್ದು ಜನ ಸೇವೆ ಮಾಡ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ರಾಜೀನಾಮೆ…