ಸಚಿವ ಕೆ.ಎಚ್. ಮುನಿಯಪ್ಪರನ್ನು ಡಿಸಿಎಂ ಮಾಡುವಂತೆ ಕೆ.ಎಚ್.ಎಂ ಅಭಿಮಾನಿ ಸಂಘದ ಅಧ್ಯಕ್ಷ ಆರ್.ವಿ‌ ಮಹೇಶ್ ಒತ್ತಾಯ

ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ  ಬದಲಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಜೊತೆಗೆ ಸಚಿವ ಸಂಪುಟ ಪುನರ್ ರಚನೆಯೂ ಆಗುವ ಕಾಲ ಬಂದಿದೆ. 7 ಬಾರಿ ಸಂಸದರು ಕೇಂದ್ರ ಸಚಿವರೂ ಆಗಿ ಅಪಾರ ಅನುಭವ ಹೊಂದಿ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಿರಿಯ ಮತ್ಸದ್ದಿ ಕೆ.ಎಚ್. ಮುನಿಯಪ್ಪನವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆ.ಎಚ್.ಎಂ ಅಭಿಮಾನಿ ಸಂಘದ ಅಧ್ಯಕ್ಷ ಆರ್.ವಿ‌ ಮಹೇಶ್ ಅವರು ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.

 

ಅನುಭವಿ ಹಿರಿಯ ಕಾಂಗ್ರೆಸ್ಸಿಗರಾದ ಮುನಿಯಪ್ಪನವರಿಗೆ ಅರ್ಹತೆಗೆ ತಕ್ಕಂತ ಸಚಿವ ಸ್ಥಾನ ದೊರೆತಿರಲಿಲ್ಲ ಈಗ ಬದಲಾವಣೆ ಪರ್ವದಲ್ಲಿ ಅವರನ್ನು ಗುರ್ತಿಸಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದರು.

 

ಕೇಂದ್ರ ಸಚಿವರಾಗಿ ಅನುಭವವಿದ್ದ ಮುನಿಯಪ್ಪನವರು ರಾಜ್ಯದಲ್ಲಿ ಗ್ಯಾರಂಟೀ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಂತಹ ಅಕ್ಕಿ ವಿತರಣೆಯ ಆಹಾರ ನಾಗರಿಕ ಸರಬರಾಜು ಸಚಿವರಾಗಿ ಮೂರು ವರ್ಷಗಳಿಂದ ಅತ್ಯತ್ತಮ ಸೇವೆ  ಸೇವೆ ಸಲ್ಲಿಸಿದ್ದು ಈಗ ಡಿಕೆ ಶಿವಕುಮಾರ್ ರವರ ಸಂಪುಟದಲ್ಲಿ ಇವರಿಗೆ ಡಿಸಿಎಂ. ಸ್ಥಾನ ನೀಡಲೇ ಬೇಕೆಂದರು.

ಮುನಿಯಪ್ಪನವರು ನಮ್ಮ ಕ್ಷೇತ್ರಕ್ಕೆ ಬಂದ ಮೇಲೆ ಇಲ್ಲಿಂದ ಸಚಿವರಾಗಿ ಯಾರೂ ಆಗಿಲ್ಲ ಎಂಬ ಕಳಂಕ ದೂರವಾಯಿತು. ಅವರು 1968 ರಲ್ಲಿಯೇ ತಾಲೂಕು ಬೋರ್ಡ್ ಅಧ್ಯಕ್ಷರಾಗಿದ್ದವರು ಶಂಕರಾನಂದ ಬಿಟ್ಟರೆ ಮುನಿಯಪ್ಪನವರೇ 7 ಬಾರಿ ಸಂಸದರಾಗಿದ್ದವರು ಅಂತಹವರು ರಾಹುಲ್ ಗಾಂಧೀ ಸೂಚನೆಯಂತೆ ಇಲ್ಲಿ ಬದು ನಿಂತು ಸಚಿವರಾದರು ಅವರು ಕೇಳಿದ ಸ್ಥಾನ ಬೇರೆ ಕೊಟ್ಟ ಖಾತೆಯೇ ಬೇರೆ ಆದರೂ ಅವರು ಯಾವುದಕ್ಕು ಆಸೆ ಪಡದೆ ಪಕ್ಷ ನಿಷ್ಟರಾಗಿದ್ದಾರೆ. ಹಾಗಾಗಿ ಅಂತಹ ಅನುಭವಿ ರಾಜಕಾರಣಿಗೆ ಹೊಸ ಸಂಪುಟದಲ್ಲಿ ಡಿಸಿಎಂ ಸ್ಥಾನ ಮೊದಲ ಆದ್ಯತೆಯಾಗಿ ನೀಡಬೇಕೆಂದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

33 minutes ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

1 hour ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

2 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

7 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

13 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago