ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆ ಬೆನ್ನಲ್ಲೇ ಬದಲಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಇದರ ಜೊತೆಗೆ ಸಚಿವ ಸಂಪುಟ ಪುನರ್ ರಚನೆಯೂ ಆಗುವ ಕಾಲ ಬಂದಿದೆ. 7 ಬಾರಿ ಸಂಸದರು ಕೇಂದ್ರ ಸಚಿವರೂ ಆಗಿ ಅಪಾರ ಅನುಭವ ಹೊಂದಿ ರಾಜ್ಯದ ಆಹಾರ ಮತ್ತು ನಾಗರೀಕ ಸರಬರಾಜು ಸಚಿವರಾಗಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಿರಿಯ ಮತ್ಸದ್ದಿ ಕೆ.ಎಚ್. ಮುನಿಯಪ್ಪನವರ ಹೆಸರನ್ನು ಅಂತಿಮಗೊಳಿಸಿ ಹೈಕಮಾಂಡ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೆ.ಎಚ್.ಎಂ ಅಭಿಮಾನಿ ಸಂಘದ ಅಧ್ಯಕ್ಷ ಆರ್.ವಿ ಮಹೇಶ್ ಅವರು ಕಾಂಗ್ರೆಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಅನುಭವಿ ಹಿರಿಯ ಕಾಂಗ್ರೆಸ್ಸಿಗರಾದ ಮುನಿಯಪ್ಪನವರಿಗೆ ಅರ್ಹತೆಗೆ ತಕ್ಕಂತ ಸಚಿವ ಸ್ಥಾನ ದೊರೆತಿರಲಿಲ್ಲ ಈಗ ಬದಲಾವಣೆ ಪರ್ವದಲ್ಲಿ ಅವರನ್ನು ಗುರ್ತಿಸಿ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದರು.
ಕೇಂದ್ರ ಸಚಿವರಾಗಿ ಅನುಭವವಿದ್ದ ಮುನಿಯಪ್ಪನವರು ರಾಜ್ಯದಲ್ಲಿ ಗ್ಯಾರಂಟೀ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯದಂತಹ ಅಕ್ಕಿ ವಿತರಣೆಯ ಆಹಾರ ನಾಗರಿಕ ಸರಬರಾಜು ಸಚಿವರಾಗಿ ಮೂರು ವರ್ಷಗಳಿಂದ ಅತ್ಯತ್ತಮ ಸೇವೆ ಸೇವೆ ಸಲ್ಲಿಸಿದ್ದು ಈಗ ಡಿಕೆ ಶಿವಕುಮಾರ್ ರವರ ಸಂಪುಟದಲ್ಲಿ ಇವರಿಗೆ ಡಿಸಿಎಂ. ಸ್ಥಾನ ನೀಡಲೇ ಬೇಕೆಂದರು.
ಮುನಿಯಪ್ಪನವರು ನಮ್ಮ ಕ್ಷೇತ್ರಕ್ಕೆ ಬಂದ ಮೇಲೆ ಇಲ್ಲಿಂದ ಸಚಿವರಾಗಿ ಯಾರೂ ಆಗಿಲ್ಲ ಎಂಬ ಕಳಂಕ ದೂರವಾಯಿತು. ಅವರು 1968 ರಲ್ಲಿಯೇ ತಾಲೂಕು ಬೋರ್ಡ್ ಅಧ್ಯಕ್ಷರಾಗಿದ್ದವರು ಶಂಕರಾನಂದ ಬಿಟ್ಟರೆ ಮುನಿಯಪ್ಪನವರೇ 7 ಬಾರಿ ಸಂಸದರಾಗಿದ್ದವರು ಅಂತಹವರು ರಾಹುಲ್ ಗಾಂಧೀ ಸೂಚನೆಯಂತೆ ಇಲ್ಲಿ ಬದು ನಿಂತು ಸಚಿವರಾದರು ಅವರು ಕೇಳಿದ ಸ್ಥಾನ ಬೇರೆ ಕೊಟ್ಟ ಖಾತೆಯೇ ಬೇರೆ ಆದರೂ ಅವರು ಯಾವುದಕ್ಕು ಆಸೆ ಪಡದೆ ಪಕ್ಷ ನಿಷ್ಟರಾಗಿದ್ದಾರೆ. ಹಾಗಾಗಿ ಅಂತಹ ಅನುಭವಿ ರಾಜಕಾರಣಿಗೆ ಹೊಸ ಸಂಪುಟದಲ್ಲಿ ಡಿಸಿಎಂ ಸ್ಥಾನ ಮೊದಲ ಆದ್ಯತೆಯಾಗಿ ನೀಡಬೇಕೆಂದರು.
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…