ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪನವರು ಅನುಭವಿ, ಹಿರಿಯ ರಾಜಕಾರಣಿ. ಕೇಂದ್ರ, ರಾಜ್ಯ ರಾಜಕಾರಣದಲ್ಲಿ ಯಾರಿಗೂ ನೋವುಂಟು ಮಾಡದೇ, ಯಾರನ್ನೂ ಕಡೆಗಣಿಸದೇ ರಾಜಕೀಯ ಮಾಡಿಕೊಂಡು ಬಂದಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಯಾವುದೇ ಕಾರಣಕ್ಕೂ ಕಡೆಗಣನೆ ಮಾಡುವುದಿಲ್ಲ. ಕಡೆಗಣನೆ ಮಾಡಿರುವ ಇತಿಹಾಸವಿಲ್ಲ ಎಂದು ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಶಿವಕುಮಾರ್ ಆರ್.ವಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪನವರು ಸ್ಥಳೀಯ ಕಾಂಗ್ರೆಸ್ ಪಕ್ಷದ ಚುನಾಯಿತ ಸದಸ್ಯರನ್ನು ಆಹ್ವಾನಿಸದೇ ಕಡೆಗಣಿಸಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ದೊಡ್ಡಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಸದೃಢವಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಸೇರಿದಂತೆ ಹಿರಿಯ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಒಂದು ವೇಳೆ ಭಿನ್ನಾಭಿಪ್ರಾಯವಿದ್ದರೆ ಪಕ್ಷದ ಚೌಕಟ್ಟಿನಲ್ಲಿ ಕುಳಿತು ಮಾತಾಡಿ ಬಗೆಹರಿಸಿಕೊಂಡು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲಾಗುವುದು ಎಂದು ತಿಳಿಸಿದರು.
ನಂತರ ಯೂತ್ ಕಾಂಗ್ರೆಸ್ ನಗರ ಬ್ಲಾಕ್ ಉಪಾಧ್ಯಕ್ಷ ಹರ್ಷಿತ್ ಕಛೇರಿಪಾಳ್ಯ ಮಾತನಾಡಿ, ನಾವು ಯುವಕರು. ಕಾಂಗ್ರೆಸ್ ಸಿದ್ಧಾಂತ ಹಾಗೂ ಹಿರಿಯರಾದ ಕೆ.ಎಚ್ ಮುನಿಯಪ್ಪ, ಮಾಜಿ ಶಾಸಕ ಟಿ.ವೆಂಕಟರಮಣಯ್ಯನವರ ಕೈ ಬಲಪಡಿಸಲು ಕಾಂಗ್ರೆಸ್ ಪಕ್ಷದಲ್ಲಿ ಇದ್ದೇವೆ. ಸಚಿವರು ಎಲ್ಲರನ್ನು ಒಗ್ಗೂಡಿಸಿಕೊಂಡು ರಾಜಕಾರಣ ಮಾಡುತ್ತಾರೆ. ಸಚಿವರಲ್ಲಿ ಮೇಲು ಕೀಳು ಎಂಬ ಮನೋಭಾವನೆ ಇಲ್ಲ. ಯಾರನ್ನೂ ಕಡೆಗಣಿಸುವುದಿಲ್ಲ. ಒಂದು ವೇಳೆ ಸಚಿವರ ಗಮನಕ್ಕೆ ಬಾರದೇ ಯಾವುದಾದರು ಎಡವಟ್ಟು ಆಗಿದ್ದರೆ ಅದನ್ನು ಸರಿಪಡಿಸಿಕೊಳ್ಳಲಾಗುವುದು ಎಂದು ಹೇಳಿದರು.
ನಂತರ ಯುವ ಕಾಂಗ್ರೆಸ್ ಸಮಿತಿಯ ತಾ.ಪ್ರ.ಕಾ ಕಂಟನಕುಂಟೆ ರಾಜಣ್ಣ ಮಾತನಾಡಿ, ಶಿಷ್ಟಚಾರ ಪ್ರಕಾರ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದರು. ಕಾರ್ಯಕ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ನಗರಸಭಾ ಸದಸ್ಯರು ಭಾಗವಹಿಸಿದ್ದರು. ಆದರೆ ಕಾಂಗ್ರೆಸ್ ಪಕ್ಷದ ನಗರಸಭಾ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸಿಲ್ಲ ಎಂಬ ಆರೋಪಗಳು ಕೇಳಿಬಂದಿದೆ. ಇದಕ್ಕೆ ಕಾರಣ ಕೆ.ಎಚ್ ಮುನಿಯಪ್ಪನವರು ಅಲ್ಲ. ಅಧಿಕಾರಿಗಳು ಮಾಡಿದ ಎಡವಟ್ಟಿನಿಂದ ಈ ಆರೋಪಗಳು ಕೇಳಿಬಂದಿದೆ. ಸಚಿವರು ಯಾರನ್ನೂ ಕಡೆಗಣಿಸಿಲ್ಲ. ಕಡೆಗಣಿಸುವುದಿಲ್ಲ ಎಂದರು…..
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…